ಬೆಂಗಳೂರು: ಮಣಿಪುರದ ಕ್ರೈಸ್ತರ ಮೇಲಿನ ದಬ್ಬಾಳಿಕೆ ಖಂಡಿಸಿ ಐಸಿಯುಎಫ್ ಪ್ರತಿಭಟನೆ
ಬೆಂಗಳೂರು: ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಕೊಲೆ, ಸುಲಿಗೆ, ದಬ್ಬಾಳಿಕೆಯನ್ನು ಖಂಡಿಸಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ (ಐಸಿಯುಎಫ್) ಮಂಗಳವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು.
2500 ಪ್ರತಿಭಟನೆಯ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಂಥೋನಿ ವಿಕ್ರಮ್, ಒಂದು ತಿಂಗಳಿನಿಂದಲೂ ಮಣಿಪುರದಲ್ಲಿ ಉದ್ವಿಗ್ನತೆ ಮಿತಿ ಮೀರಿದೆ. ಈವರೆಗೆ ದುಷ್ಕರ್ಮಿ ಗಳ ದಾಳಿಯಿಂದ 150ಕ್ಕೂ ಹೆಚ್ಚು ಚರ್ಚ್ಗಳು ನೆಲ ಸಮವಾಗಿವೆ. ಸಾವಿರಾರು ಜನರು ಸಾವನ್ನಪ್ಪಿದ್ದಾರೆ. 80ಕ್ಕೂ ಹೆಚ್ಚು ಹಳ್ಳಿಗಳು ಸುಟ್ಟು ಕರಕಲಾಗಿವೆ. ಲಕ್ಷಾಂತರ ಕ್ರೈಸ್ತ ಕುಟುಂಬಗಳು ನಿರಾಶ್ರಿತರಾಗಿವೆ. ಪರಿಸ್ಥಿತಿ ಬಿಗಡಾಯಿಸಿದ್ದರೂ ಇಲ್ಲಿಯವರೆಗೂ ಮಣಿಪುರ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದ ರಿಂದ ಈ ದಾಳಿಯ ಹಿಂದೆ ಸರಕಾರವೂ ಶಾಮೀಲಾಗಿದೆ ಎನ್ನುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ಕೂಡಲೇ ಮಣಿಪುರದ ಸರಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಬೇಕೆಂದು ಒತ್ತಾ ಯಿಸಿ ಸಂಘಟನೆಯ ಸದಸ್ಯರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.