ಬೆಂಗಳೂರು: ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ್ದ 7 ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. 531 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಸುಮಾರು 100 ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ ರವಿ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಅವರ ಪರವಾಗಿ ಉತ್ತರ ನೀಡಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಆಹಾರ ಸಚಿವರ ಗೈರುನಲ್ಲಿ ಸಚಿವ ಸಿ.ಟಿ. ರವಿ ಅವರು ಸದನಕ್ಕೆ ಉತ್ತರಿಸಿದರು.