ಬಂಟ್ವಾಳ : ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬಳಿ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.
ವಿಟ್ಲ ಪಡ್ನೂರು ಗ್ರಾಮದ ನಿವಾಸಿಗಳಾದ ಸುವರ್ಣ ನಾಯ್ಕ್ ಮತ್ತು ಮಹಮ್ಮದ್ ಶರೀಫ್ ಬಂಧಿತರು. ಇಬ್ಬರು ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಮದ್ಯದ ಟೆಟ್ರಾ ಪ್ಯಾಕೇಟ್ ಗಳನ್ನು ಸಾಗಾಟ ಮಾಡುತ್ತಿದ್ದರು. ಅಧಿಕ ಬೆಲೆಗೆ ಮಾರಾಟ ಮಾಡುವ ಹುನ್ನಾರನ್ನ ನಡೆಸಿದ್ದರು.
ಈ ಸಂದರ್ಭದಲ್ಲಿ 3360ರೂ. ಮೌಲ್ಯದ 8.640 ಲೀಟರ್ ಮದ್ಯ, 96 ಟೆಟ್ರಾ ಪ್ಯಾಕೇಟ್ ಗಳನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.