ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್‌ 18ಕ್ಕೆ ದೇಶವ್ಯಾಪಿ ಪ್ರತಿಭಟನೆ

Source: ANI | By MV Bhatkal | Published on 12th June 2021, 7:52 PM | National News | Don't Miss |

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ಇದೇ 18ರಂದು ‘ರಕ್ಷಕರನ್ನು ಉಳಿಸಿ’ ಎಂಬ ಘೋಷಣೆಯೊಂದಿಗೆ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ.
ಆರೋಗ್ಯ ಕ್ಷೇತ್ರದ ವೃತ್ತಿಪರರನ್ನು ಗುರಿಯಾಗಿಸಿಕೊಂಡು ನಡೆಸುವ ಹಿಂಸಾಚಾರದ ವಿರುದ್ಧ ಕಪ್ಪು ಪಟ್ಟಿ, ಮಾಸ್ಕ್‌, ರಿಬ್ಬನ್, ಶರ್ಟ್ ಧರಿಸಿ ಮತ್ತು ಜಾಗೃತಿ ಅಭಿಯಾನ ಮೂಡಿಸುವ ಮೂಲಕ ಪ್ರತಿಭಟನೆ ನಡೆಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘವು ತನ್ನ ಎಲ್ಲ ರಾಜ್ಯ ಮತ್ತು ಸ್ಥಳೀಯ ಶಾಖೆಗಳಿಗೆ ಸೂಚನೆ ನೀಡಿದೆ.
ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಇತರ ಸ್ಥಳಗಳಲ್ಲಿ ಕಳೆದ ಎರಡು ವಾರಗಳಲ್ಲಿ ವೈದ್ಯರ ಮೇಲೆ ನಡೆದ ಸರಣಿ ಹಿಂಸಾಚಾರಗಳು ಅತ್ಯಂತ ಘಾಸಿಗೊಳಿಸುವಂತದ್ದು ಎಂದು ಐಎಂಎ ಹೇಳಿದೆ.
ಐಎಂಎಯ ಕ್ರಿಯಾ ಸಮಿತಿಯು, ವೈದ್ಯಕೀಯ ವೃತ್ತಿಯ ಮೇಲೆ ಮತ್ತು ವೃತ್ತಿಪರರ ಮೇಲಿನ ಆಕ್ರಮಣ ನಿಲ್ಲಿಸುವ ಬೇಡಿಕೆಯೊಂದಿಗೆ ‘ರಕ್ಷಕರನ್ನು ರಕ್ಷಿಸಿ’ ಘೋಷಣೆ ಹಾಕಲು ನಿರ್ಧರಿಸಿದೆ. ಅಲ್ಲದೇ ವೈದ್ಯರು ತಮ್ಮ ಕಾಳಜಿ, ಆಕ್ರೋಶ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಲು ಜೂನ್ 18ರಂದು ರಾಷ್ಟ್ರೀಯ ಪ್ರತಿಭಟನಾ ದಿನವಾಗಿ ಆಚರಿಸಲು ನಿರ್ಧರಿಸಿದೆ ಎಂದು ಅದು ತಿಳಿಸಿದೆ.
ಅಲ್ಲದೇ ಜೂನ್ 15 ಅನ್ನು ರಾಷ್ಟ್ರೀಯ ಬೇಡಿಕೆಯ ದಿನವಾಗಿ ಆಚರಿಸಲಾಗುವುದು ಮತ್ತು ಅಂದು ದೇಶದಾದ್ಯಂತ ಐಎಂಎ ಶಾಖೆಗಳಿಂದ ಪತ್ರಿಕಾಗೋಷ್ಠಿ ನಡೆಸಲಾಗುವುದು ಎಂದು ಹೇಳಿದೆ.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...