ಭಟ್ಕಳದಲ್ಲಿ ಗುಡುಗುಮಿಂಚಿನ ಮಳೆಗೆ ಧರಾಶಾಹಿಯಾದ ಮರ; ರಸ್ತೆ ಸಂಚಾರ ಅಸ್ತವ್ಯಸ್ಥ

Source: SOnews | By Staff Correspondent | Published on 19th May 2024, 5:11 PM | Coastal News | Don't Miss |

 

ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರಿಗೆ ತಂಪಿನ ಅನುಭವ ನೀಡಿದ ಮಳೆರಾಯ

ಭಟ್ಕಳ: ಭಟ್ಕಳದಲ್ಲಿ ಭಾನುವಾರ ಬೆಳಗ್ಗೆಯಿಂದ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಆರಂಭಗೊಂಡಿದ್ದು ಕೆಲವು ಕಡೆಗಳಲ್ಲಿ ಬೃಹತ್ ಮರಗಳು ಧರೆಗೆ ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.

ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ  ಅಲ್ಲಮಾ ಇಕ್ಬಾಲ್ ಪ್ರಾಥಮಿಕ ಶಾಲೆ ಬಳಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಬೃಹತ್ ಮರವು ರಸ್ತೆಗೆ ಉರುಳಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು ಪ.ಪಂ. ಸದಸ್ಯರಾದ ತೌಫೀಖ್ ಬ್ಯಾರಿ, ವಸೀಮ್ ಮನೆಗಾರ್ ಎಸ್.ಡಿ.ಪಿಐ ಭಟ್ಕಳ ಅಸೆಂಬ್ಲಿ ಅಧರ್ಧಕ್ಷ ಮಕ್ಬೂಲ್ ಶೇಕ್ ಮತ್ತು ಇರ್ಫಾನ್ ಎಂಬುವವರು ಸ್ಥಳಕ್ಕೆ ತಲುಪಿ ಮರವನ್ನು ತೆರವುಗೊಳಿಸಿದರು.

ಕಳೆದ ಹಲವುದಿನಗಳಿಂದ ಭಟ್ಕಳದಲ್ಲಿ ಉತ್ತರಕರ್ನಾಟಕದ ರೀತಿಯಲ್ಲಿ ಬಿಸಿಲಿನ ಝಳದ ಅನುಭವವಾಗುತ್ತಿದ್ದು ಭಾನುವಾರ ಬಿದ್ದ ಮಳೆಗೆ ವಾತವರಣದಲ್ಲಿ ಕೊಂಚ ಬದಲಾವಣೆಯಾದಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದಾಗಿ ಕರಾವಳಿ ಕರ್ನಾಟಕದ ಮೇಲೆ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹೆಚ್ಚಿನ ಅಲೆಗಳು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಗಳೂ ಇವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ಮೀನುಗಾರಿಕೆಗೆಂದು ಸಮುದ್ರಕ್ಕೆ ಇಳಿದಿರುವವರು ಕೂಡಲೇ ದೋಣಿಗಳನ್ನು ಬಿಟ್ಟು ಬೋಟು ಸಮೇತ ದಡಕ್ಕೆ ಬರಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ಇದೇ ರೀತಿಯ ಟ್ರೆಂಡ್ ಮೇ 22 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

ಭಟ್ಕಳ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಕಳೆದ ವಾರ ಬಿಸಿಲಿನ ಝಳದಿಂದಾಗಿ ಜನರ ಸ್ಥಿತಿ ಶೋಚನೀಯವಾಗಿತ್ತು. ಕೆಲವೆಡೆ ಮಿಂಚು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

 

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...