ಹಾಲು ಉತ್ಪಾದಕರ ನೂತನ ಸಹಕಾರ ಸಂಘ ಉದ್ಘಾಟನೆ

Source: sonews | By Staff Correspondent | Published on 23rd November 2020, 9:50 PM | State News |

ಶ್ರೀನಿವಾಸಪುರ: ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಕುವುದರ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.

ತಾಲ್ಲೂಕಿನ ಮರಿಪಲ್ಲಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಕೆಲವು ಹಾಲು ಉತ್ಪಾದಕರು ತಾವು ಉತ್ಪಾದಿಸಿದ ಹಾಲನ್ನು ಖಾಸಗಿ ಡೇರಿಗಳಿಗೆ ಹಾಕುವುದುದರ ಮೂಲಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಹಾಲು ಉತ್ಪಾದಕರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.

ಕ್ಯಾಂಪ್‌ಕಚೇರಿಯ ಉಪ ವ್ಯವಸ್ಥಾಪಕ ಡಾ.ವಿ.ಎನ್‌.ಶ್ರೀಕಾಂತ್‌ ಮಾತನಾಡಿದರು. 

ಶಿಬಿರ ಕಚೇರಿ ಸಹಾಯಕ ವ್ಯವಸ್ಥಾಪಕ ಕೆ.ಎಸ್‌.ನರಸಿಂಹಯ್ಯ, ವಿಸ್ತರಣಾಧಿಕಾರಿ ಎಂ.ಜಿ.ಶ್ರೀನಿವಾಸ್‌, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬರಾಯಪ್ಪ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...