ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು .
ಹಿರಿಯ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವಕೀಲರ ಪಾತ್ರವನ್ನು ಸ್ಮರಿಸಿದರು.
ವಕೀಲ ವೃತ್ತಿಯಿಂದ ರಾಷ್ಟ್ರ ನಾಯಕರಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ , ಡಾ.ಬಾಬು ರಾಜೇಂದ್ರ ಪ್ರಸಾದ್ , ಸರ್ದಾರ್ ವಲ್ಲಭಬಾಯಿ ಪಟೇಲ್ , ಮದನ್ ಮೋಹನ್ ಮಾಳವಿಯಾ , ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಮೊದಲಾದವರವರನ್ನು ಸ್ಮರಿಸಿದರು .
ಸಂವಿಧಾನದ 51 ಎ ವಿಧಿಯಡಿಯಲ್ಲಿರುವ ಮೂಲಭೂತ ಕರ್ತವ್ಯಗಳನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರು ನಿರ್ವಹಿಸಬೇಕು. ನ್ಯಾಯಾಂಗ ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯಿಂದ ಪ್ರಮುಖ ಬದಲಾವಣೆಗಳಾಗುತ್ತಿವೆ , ಆಧುನಿಕರಣದ ಈ ಯುಗದಲ್ಲಿ ಹೆಚ್ಚಿನ ತಂತ್ರಜ್ಞಾನದ ಮೂಲಸೌಕರ್ಯವನ್ನು ನಿರ್ಮಿಸುವ ಅಗತ್ಯತೆ ಇದೆ ಎಂದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ , ಎ.ಎಸ್.ಕಿಣಗಿ , ಎಂ.ಐ.ಅರುಣ ,ರವಿ ಹೊಸಮನಿ , ಜೆ.ಎಮ್.ಖಾಜಿ , ಅನಂತ ಆರ್ . ಹೆಗಡೆ , ಅಧಿಕ ಮಹಾವಿಲೇಖನಾಧಿಕಾರಿ ರೋಣ ವಾಸುದೇವ, ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್.ಹುಲಗಿ ಸೇರಿದಂತೆ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ , ರಾಜ್ಯ ಸರ್ಕಾರದ ವಕೀಲರು , ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ , ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು .