ಧಾರವಾಡ ಹೈಕೋರ್ಟ್ ಪೀಠದಲ್ಲಿ ಸ್ವಾತಂತ್ರ್ಯೋತ್ಸವ

Source: SO News | By Laxmi Tanaya | Published on 15th August 2022, 10:50 PM | State News | Don't Miss |

ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ  ಪೀಠದಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು . 

ಹಿರಿಯ ನ್ಯಾಯಮೂರ್ತಿ  ಎಸ್.ಜಿ.ಪಂಡಿತ್  ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ,  ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವಕೀಲರ ಪಾತ್ರವನ್ನು ಸ್ಮರಿಸಿದರು.

ವಕೀಲ ವೃತ್ತಿಯಿಂದ ರಾಷ್ಟ್ರ ನಾಯಕರಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ , ಡಾ.ಬಾಬು ರಾಜೇಂದ್ರ ಪ್ರಸಾದ್ , ಸರ್ದಾರ್ ವಲ್ಲಭಬಾಯಿ ಪಟೇಲ್ , ಮದನ್ ಮೋಹನ್ ಮಾಳವಿಯಾ ,  ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ  ಮೊದಲಾದವರವರನ್ನು ಸ್ಮರಿಸಿದರು . 

 ಸಂವಿಧಾನದ 51 ಎ  ವಿಧಿಯಡಿಯಲ್ಲಿರುವ ಮೂಲಭೂತ ಕರ್ತವ್ಯಗಳನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರು ನಿರ್ವಹಿಸಬೇಕು. ನ್ಯಾಯಾಂಗ ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯಿಂದ ಪ್ರಮುಖ ಬದಲಾವಣೆಗಳಾಗುತ್ತಿವೆ , ಆಧುನಿಕರಣದ ಈ ಯುಗದಲ್ಲಿ  ಹೆಚ್ಚಿನ ತಂತ್ರಜ್ಞಾನದ ಮೂಲಸೌಕರ್ಯವನ್ನು ನಿರ್ಮಿಸುವ ಅಗತ್ಯತೆ ಇದೆ ಎಂದರು.

 ಕರ್ನಾಟಕ ಉಚ್ಛ ನ್ಯಾಯಾಲಯದ  ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ ,  ಎ.ಎಸ್.ಕಿಣಗಿ ,  ಎಂ.ಐ.ಅರುಣ ,ರವಿ ಹೊಸಮನಿ ,  ಜೆ.ಎಮ್.ಖಾಜಿ , ಅನಂತ ಆರ್ . ಹೆಗಡೆ , ಅಧಿಕ ಮಹಾವಿಲೇಖನಾಧಿಕಾರಿ ರೋಣ ವಾಸುದೇವ, ನ್ಯಾಯಾಂಗದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್.ಹುಲಗಿ ಸೇರಿದಂತೆ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ , ರಾಜ್ಯ ಸರ್ಕಾರದ ವಕೀಲರು , ರಾಜ್ಯ ಪಬ್ಲಿಕ್  ಪ್ರಾಸಿಕ್ಯೂಟರ್ , ಮತ್ತು ವಕೀಲರ ಸಂಘದ ಪದಾಧಿಕಾರಿಗಳು  ಹಾಜರಿದ್ದರು .

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...