ಕೊರೋನಾ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ: ಪ್ರಧಾನಿ ಮೋದಿ

Source: uni | Published on 10th July 2020, 2:18 AM | National News | Don't Miss |

 

ನವದೆಹಲಿ: ಇಡೀ ವಿಶ್ವವೇ ಕೊರೋನಾ ಸಂಕಷ್ಟದಿಂದ ತತ್ತರಿಸಿ ಪುನರುಜ್ಜೀವನಕ್ಕೆ ಮುಂದಾಗುತ್ತಿರುವ ಸಂದರ್ಭದಲ್ಲಿ, ಭಾರತ ಆರ್ಥಿಕತೆ ಸೇರಿದಂತೆ ಎಲ್ಲ ಸವಾಲುಗಳಿಂದ ಸಹಜವಾಗಿ ಹೊರಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊವಿಡ್ ಲಸಿಕೆ ಕಂಡುಹಿಡಿದ ನಂತರ ಅದನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸುಧಾರಣೆ ಮತ್ತು ಪುನರುಜ್ಜೀವನಗೊಳಿಸುವ ದೇಶದ ಸಾಮರ್ಥ್ಯದ ಬಗ್ಗೆ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, ಭಾರತೀಯರು ನೈಸರ್ಗಿಕ ಸುಧಾರಕರು. ಸಾಮಾಜಿಕ ಅಥವಾ ಆರ್ಥಿಕತೆ ಸೇರಿದಂತೆ ಭಾರತವು ಪ್ರತಿ ಸವಾಲನ್ನು ಜಯಿಸಿದೆ ಎಂದು ಇತಿಹಾಸವು ತೋರಿಸಿದೆ ಎಂದಿದ್ದಾರೆ. 
ಇಂಡಿಯಾ ಗ್ಲೋಬಲ್ ವೀಕ್‍ 2020 ಉದ್ಘಾಟಿಸಿ ಮಾತನಾಡಿದ ಮೋದಿ, ಒಂದು ಕಡೆ ಭಾರತ ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಪ್ರಬಲ ಹೋರಾಟ ನಡೆಸುತ್ತಿದೆ. ಜನರ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸುವುದರೊಂದಿಗೆ, ನಾವು ಆರ್ಥಿಕತೆಯ ಆರೋಗ್ಯದ ಮೇಲೆ ಸಮಾನವಾಗಿ ಕೇಂದ್ರೀಕರಿಸಿದ್ದೇವೆ ಎಂದರು. 
ಭಾರತವು ವಿಶ್ವದ ಅತ್ಯಂತ ಮುಕ್ತ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ಎಲ್ಲಾ ಜಾಗತಿಕ ಕಂಪನಿಗಳು ಬಂದು ಭಾರತದಲ್ಲಿ ತಮ್ಮ ಅಸ್ತಿತ್ವವನ್ನು ಸ್ಥಾಪಿಸಲು ನಾವು ರೆಡ್ ಕಾರ್ಪೆಟ್ ಹಾಕುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧ್ಯತೆಗಳು ಮತ್ತು ಅವಕಾಶಗಳಿವೆ. ಕೃಷಿಯಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು ಬಹಳ ಆಕರ್ಷಕವಾದ ಹೂಡಿಕೆಗೆ ಅವಕಾಶವನ್ನು ಒದಗಿಸುತ್ತದೆ" ಎಂದು ಅವರು ಒತ್ತಿ ಹೇಳಿದರು.
ಅಸಾಧ್ಯವಾದುದನ್ನು ಸಾಧಿಸುವ ಮನೋಭಾವ ಭಾರತೀಯರಿಗಿದ್ದು, ಈಗಾಗಲೇ ಆರ್ಥಿಕ ಚೇತರಿಕೆ ಚಿಗುರೊಡೆಯುತ್ತಿದೆ. ಈ ಸಂದರ್ಭದಲ್ಲಿ ತಂತ್ರಜ್ಞಾನಕ್ಕೆ ಧನ್ಯವಾದಗಳು, ಪ್ರತಿ ಪೈಸೆಯೂ ನೇರವಾಗಿ ಫಲಾನುಭವಿಗಳನ್ನು ತಲುಪಿದೆ.
ಉಚಿತ ಅಡುಗೆ ಅನಿಲ, ಬ್ಯಾಂಕ್ ಖಾತೆಗಳಲ್ಲಿ ನಗದು, ಲಕ್ಷಾಂತರ ಜನರಿಗೆ ಉಚಿತ ಆಹಾರ ಧಾನ್ಯಗಳು ಮತ್ತು ಇತರ ಅನೇಕ ವಸ್ತುಗಳನ್ನು ಪರಿಹಾರ ರೂಪದಲ್ಲಿ ಒದಗಿಸಲಾಗಿದೆ ಎಂದರು. 
ಕಳೆದ ಆರು ವರ್ಷಗಳಲ್ಲಿ, ಭಾರತವು ಒಟ್ಟು ಆರ್ಥಿಕ ಸೇರ್ಪಡೆ, ಇನ್ಫ್ರಾ ಕನ್ಸ್ಟ್ರಕ್ಷನ್, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್, ಜಿಎಸ್ ಟಿ ಸೇರಿದಂತೆ ದಿಟ್ಟ ತೆರಿಗೆ ಸುಧಾರಣೆಗಳಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಲಾಭ ಗಳಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...