ಯುದ್ಧಪೀಡಿತ ಗಾಝಾಕೆ ಭಾರತದಿಂದ ಮಾನವೀಯ ನೆರವು ರವಾನೆ

Source: Vb | By I.G. Bhatkali | Published on 23rd October 2023, 7:51 AM | National News | Global News |

ಹೊಸದಿಲ್ಲಿ: ಭಾರತವು ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ಫೆಲೆಸ್ತೀನಿಯರಿಗಾಗಿ ರವಿವಾರ 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್‌ಗಳಷ್ಟು ವಿಪತ್ತು ಪರಿಹಾರ ಸಾಮಗ್ರಿಗಳನ್ನು ರವಾನಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಿಳಿಸಿದೆ.

ಅಗತ್ಯ ಜೀವರಕ್ಷಕ ಔಷಧಿಗಳು,ಶಸ್ತ್ರಚಿಕಿತ್ಸಾ ಸಾಮಗ್ರಿಗಳು,ಟೆಂಟ್‌ಗಳು, ಕ್ಲೀಪಿಂಗ್ ಬ್ಯಾಗ್ ಗಳು,ಟಾರ್ಪಾಲಿನ್‌ಗಳು, ನೈರ್ಮಲ್ಯ ಸಾಧನಗಳು,ಜಲ ಶುದ್ದೀಕರಣ ಮಾತ್ರೆಗಳು ಮತ್ತು ಇತರ ಅಗತ್ಯ ವಸ್ತುಗಳು ಸೇರಿದಂತೆ ಸುಮಾರು 38 ಟನ್‌ಗಳಷ್ಟು ಮಾನವೀಯ ನೆರವನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-17 ವಿಮಾನವು ಘಾಝಿಯಾಬಾದ್‌ನ ಹಿಂಡನ್ ವಾಯುಪಡೆ ನಿಲ್ದಾಣದಿಂದ ಈಜಿಪ್ಟ್ನ ಅಲ್ ಅರಿಶ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಲಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ನಡುವೆ ಔಷಧಿಗಳು ಮತ್ತು ಸೀಮಿತ ಪ್ರಮಾಣದ ಆಹಾರ ಸಾಮಗ್ರಿಗಳನ್ನು ಹೊತ್ತ ಸುಮಾರು 20 ಟ್ರಕ್‌ಗಳು ಶನಿವಾರ ಈಜಿಪ್ಟ್ನ ರಫಾ ಗಡಿಯಿಂದ ಗಾಝಾವನ್ನು ಪ್ರವೇಶಿಸಿವೆ.

ಆದರೆ ಗಾಝಾದಲ್ಲಿ ತುರ್ತು ಅಗತ್ಯಗಳನ್ನು ಪೂರೈಸಲು ದಿನಕ್ಕೆ ಕನಿಷ್ಠ 100 ಟ್ರಕ್‌ಗಳು ಬೇಕು. ಯಾವುದೇ ನೆರವಿನ ಪೂರೈಕೆ ನಿರಂತರವಾಗಿರಬೇಕು ಮತ್ತು ಸಾಕಷ್ಟು ಪ್ರಮಾಣದಲ್ಲಿರಬೇಕು ಎಂದು ವಿಶ್ವಸಂಸ್ಥೆ ಅಧಿಕಾರಿಗಳು ಹೇಳಿದ್ದಾರೆ. ಸಂಘರ್ಷ ಆರಂಭಗೊಳ್ಳುವ ಮುನ್ನ ಸಾಮಾನ್ಯವಾಗಿ ಪ್ರತಿದಿನ ಗಾಝಾಕ್ಕೆ ನೂರಾರು ಟ್ರಕ್‌ಗಳು ಆಗಮಿಸುತ್ತಿದ್ದವು ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ. ಗಾಝಾದ ಏಕೈಕ ಇಸ್ರೇಲಿಯೇತರ ಗಡಿಯಾಗಿರುವ ರಫಾ ಅನ್ನು જે ತೆರೆಯಲು ಈಜಿಪ್ಟ್,ಇಸ್ರೇಲ್ ಮತ್ತು ಹಮಾನ ಒಪ್ಪಿಗೆ ಅಗತ್ಯವಾಗಿರುವುದು ಸಮಸ್ಯೆಯನ್ನು ಸೃಷ್ಟಿಸಿದೆ. ಈ ಗಡಿಯು ಈಗಲೂ ಮುಚ್ಚಿರುವುದಕ್ಕೆ ಈಜಿಪ್ಟ್ ಮತ್ತು ಇಸ್ರೇಲ್ ಪರಸ್ಪರರನ್ನು ಮತ್ತು ಹಮಾಸ್‌ನ್ನು ದೂರುತ್ತಿವೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...