ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 65 ಲಕ್ಷ ತಲುಪಬಹುದು: ಕೇಂದ್ರದ ವಿರುದ್ದ ಚಿದಂಬರಂ ದಾಳಿ ಕಿಡಿ

Source: ANI | Published on 6th September 2020, 12:01 AM | National News |

 

ನವದೆಹಲಿ: ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 65 ಲಕ್ಷ ತಲುಪಬಹುದು ಎಂದು ಕೊರೋನಾ ಪರಿಸ್ಥಿತಿ ನಿರ್ವಹಣೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್ 30ರೊಳಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 55 ಲಕ್ಷ ತಲುಪಬಹುದು ಎಂದು ಊಹಿಸಿದ್ದೆ. ಆದರೆ, ನನ್ನ ಊಹೆ ತಪ್ಪಾಗಿದೆ. ಸೆಪ್ಟೆಂಬರ್ 20ರೊಳಗೆ ಅಥವಾ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 65 ಲಕ್ಷ ತಲುಪಲಿದೆ ಎಂದು ಹೇಳಿದ್ದಾರೆ. 
ಕೊರೋನಾ ನಿಯಂತ್ರಿಸಲು ಲಾಕ್‌ಡೌನ್ ಕಾರ್ಯತಂತ್ರದ ಲಾಭವನ್ನು ಪಡೆಯದ ಏಕೈಕ ದೇಶವೆಂದರೆ ಅದು ಭಾರತವಾಗಿದೆ. 21 ದಿನಗಳಲ್ಲಿ ನಾವು ಕೊರೋನಾವೈರಸ್'ನ್ನು ಹಿಮ್ಮೆಟ್ಟಿಸುತ್ತೇವೆಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು, ಇತರ ದೇಶಗಳು ಯಶಸ್ವಿಯಾಗುತ್ತಿರುವ ಈ ಸಂದರ್ಭದಲ್ಲಿ ಭಾರತ ಏಕೆ ವಿಫಲವಾಗಿದೆ ಎಂಬುದಕ್ಕೆ ಮೋದಿ ಉತ್ತರಿಸಬೇಕು ಎಂದು ತಿಳಿಸಿದ್ದಾರೆ. 
ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಶನಿವಾರ ಸಾರ್ವಕಾಲಿಕ ದಾಖಲೆಯ 86,432 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಕೊರೋನಾ ತವರು ಚೀನಾದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ದಾಖಲಾದ (85, 102) ಪ್ರಕರಣಗಳಿಂತಲೂ ಹೆಚ್ಚು ಎನ್ನುವುದು ಗಮನಾರ್ಹ ವಿಚಾರವಾಗಿದೆ. 
ದೇಶದಲ್ಲಿ ಒಂದೇ ದಿನ 86,432 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿ 40,23,179ಕ್ಕೆ ತಲುಪಿದೆ. 
ಇನ್ನು 40,23,179 ಲಕ್ಷ ಪ್ರಕರಣಗಳೊಂದಿಗೆ ವಿಶ್ವದಲ್ಲಿ 2ನೇ ಸ್ಥಾನದಲ್ಲಿರುವ ಬ್ರೆಜಿಲ್ ರಾಷ್ಟ್ರವನ್ನು ಭಾರತ ಶೀಘ್ರದಲ್ಲೇ ಹಿಂದಿಕ್ಕುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...