ನವದೆಹಲಿ: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಜೈಪುರದ ಪ್ರವಾಸಿ ಆಕರ್ಷಣೆಯಾದ ಪತ್ರಿಕಾ ಗೇಟ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ, 'ಇಂದು ದೇಶದ ಸ್ಥಳೀಯ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಸಾಗುತ್ತಿವೆ, ಭಾರತದ ಧ್ವನಿ ಕೂಡ ಜಾಗತಿಕವಾಗಿ ಹೆಚ್ಚುತ್ತಿದೆ. ಇಂದು ದೇಶವು ವಿಶ್ವ ಮಟ್ಟದಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿದೆ ಎಂದು ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
'ಇಂದು, ಭಾರತವು ಪ್ರತಿಯೊಂದು ಜಾಗತಿಕ ಹಂತದಲ್ಲೂ ಬಲವಾದ ಅಸ್ತಿತ್ವವನ್ನು ಹೊಂದಿದೆ. ಅಂತಹ ಸಮಯದಲ್ಲಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾಗಿದೆ. ನಮ್ಮ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳು ಜಾಗತಿಕ ಖ್ಯಾತಿಯನ್ನು ಹೊಂದಿರಬೇಕು. ಈ ಡಿಜಿಟಲ್ ಯುಗದಲ್ಲಿ, ನಾವು ಪ್ರಪಂಚದಾದ್ಯಂತ ಡಿಜಿಟಲ್ ತಲುಪಬೇಕು. ಅಲ್ಲದೆ ಭಾರತೀಯ ಸಂಸ್ಥೆಗಳು ವಿಶ್ವದ ವಿವಿಧ ಭಾಗಗಳಲ್ಲಿ ನೀಡುತ್ತಿರುವ ರೀತಿಯಲ್ಲಿ ಸಾಹಿತ್ಯ ಪ್ರಶಸ್ತಿಗಳನ್ನು ಸಹ ನೀಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾ ಸಮೂಹದ ಅಧ್ಯಕ್ಷ ಗುಲಾಬ್ ಕೊಠಾರಿ ಬರೆದಿರುವ 'ಸಂವಾದ್ ಉಪನಿಷತ್' ಮತ್ತು 'ಅಕ್ಷರ ಯಾತ್ರೆ' ಎಂಬ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಹೊಸ ತಲೆಮಾರಿನವರಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆಯಿತ್ತ ಮೋದಿ, "ಇಂದು, ಪಠ್ಯ ಮತ್ತು ಟ್ವೀಟ್ ನ ಈ ಯುಗದಲ್ಲಿ, ನಮ್ಮ ಹೊಸ ಪೀಳಿಗೆಯವರು ಗಂಭೀರವಾದ ಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ದೂರ ಸರಿಯದಿರುವುದು ಮುಖ್ಯ" ಎಂದು ಪ್ರಧಾನಿ ಹೇಳಿದರು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ, ಕೊರೋನಾ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಭಾರತೀಯ ಮಾಧ್ಯಮಗಳು ಮಹತ್ವದ ಪಾತ್ರ ವಹಿಸಿವೆ. ನಮ್ಮ ಮಾಧ್ಯಮಗಳು ಸರ್ಕಾರದ ಕ್ರಮಗಳನ್ನು ವಿವರಿಸುವ ಮತ್ತು ಸರ್ಕಾರದ ಯೋಜನೆಗಳಲ್ಲಿನ ನ್ಯೂನತೆಗಳನ್ನು ಟೀಕಿಸುವ ಉತ್ತಮ ಕೆಲಸವನ್ನು ಮಾಡುತ್ತಿವೆ” ಎಂದರು.
Read These Next
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...
ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...
ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...