ಭಟ್ಕಳ: ಎಪ್ರಿಲ್ 27 ಶನಿವಾರದಂದು ಇಲ್ಲಿನ ನವಾಯತ ಕಾಲೋನಿಯ ಕುಶಾಲ್ ಸಭಾ ಭವನದಲ್ಲಿ ಇಂಡಿಯನ್ ನವಾಯತ್ ಫೋರಂ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ತಾಲೂಕು ಸೇರಿದಂತೆ ಸುತ್ತಮುತ್ತಲಿನ ಉದ್ಯೋಗಾಂಕ್ಷಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಪೋರಂ ಅಧ್ಯಕ್ಷ ಅಬ್ದುಲ್ ಮಜೀದ್ ಜುಕಾಕು ಹೇಳಿದರು.
ಅವರು ಗುರುವಾರದಂದು ಇಲ್ಲಿನ ರಾಬಿತಾ ಸೊಸೈಟಿ ಕಾರ್ಯಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
ನಮ್ಮ ಫೋರಂ ರಚನೆಯ ಮುಖ್ಯ ಉದ್ದೇಶ ಜಮಾತ್ಗಳನ್ನು ಪರಸ್ಪರ ಒಟ್ಟುಗೂಡಿಸುವುದು, ಜನರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದು, ಸಾಮಾಜಿಕ, ನೈತಿಕ ಹಾಗೂ ಧರ್ಮದಾವಾ ಕಾರ್ಯಗಳನ್ನು ಹಮ್ಮಿಕೊಳ್ಳುವುದು, ಪರಸ್ಪರ ಸಂಬಂಧಗಳನ್ನು ವೃದ್ಧಿಸುವುದು, ದೇಶಾಭಿಮಾನ, ದೇಶ ಸೇವೆಯನ್ನು ಪ್ರೇರೇಪಿಸುದು ಸೇರಿದೆ. ಪ್ರಥಮವಾಗಿ ಖಾಲಿ ಇರುವ ಕೈಗಳಿಗೆ ದುಡಿಯುವ ಅವಕಾಶವನ್ನು ಒದಗಿಸಿಕೊಡುತ್ತಿದ್ದು ಪ್ರತಿಯೋರ್ವರೂ ಕೂಡಾ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದು.
ಸಂಚಾಲಕ ಅಫ್ತಾಬ್ ಹುಸೇನ್ ಕೋಲಾ ಅವರು ಉದ್ಯೋಗ ಮೇಳದ ಬಗ್ಗೆ ಮಾತನಾಡಿದ್ದು ತಾಲೂಕಿನಲ್ಲಿ ಅನೇಕ ಅರ್ಹ ಜನರಿದ್ದು ಅವರಿಗೆ ಸರಿಯಾದ ಉದ್ಯೋಗ ದೊರೆಯದೇ ತೊಂದರೆ ಅನುಭವಿಸುತಿದ್ದಾರೆ. ಹಲವಾರು ಅವಕಾಶಗಳನ್ನು ತೆರೆದಿಡಲಾಗುತ್ತಿದ್ದು ಪ್ರಥಮ ಬಾರಿಗೆ ನಮ್ಮ ಫೋರಂ ಸಾಮಾಜಿಕ ಸಬಲೀಕರಣದ ಅಡಿಯಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಇತ್ತೀಚೆಗೆ ವಿದೇಶದಿಂದಲೂ ಕೂಡಾ ಸಾಕಷ್ಟು ಜನರು ಊರಿಗೆ ವಾಪಾಸು ಬರುತ್ತಿದ್ದು ಅವರಿಗೆ ಉತ್ತಮ ಉದ್ಯೋಗದ ಅನಿವಾರ್ಯತೆ ಇದೆ. ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತೆ ವ್ಯವಹಾರಗಳನ್ನು ಮಾಡಲು ಸಹ ಸಲಹೆ ನೀಡಲು ವ್ಯವಸ್ಥೆ ಮಾಡಲಾಗಿದೆ
ನಮ್ಮ ಉದ್ದೇಶ ಉದ್ಯೋಗದಾತರೇ ನಮ್ಮ ಊರಿಗೆ ಬಂದು ಅವರಿಗೆ ಬೇಕಾಗಿರುವವರನ್ನು ಆರಿಸಿಕೊಳ್ಳುತ್ತಾರೆ. ಕೇವಲ ಕಾಲೇಜುಗಳಲ್ಲಿ ನಡೆಯುತ್ತಿದ್ದ ಉದ್ಯೋಗ ಮೇಳವನ್ನು ನಾವು ವಿಸ್ತಾರಗೊಳಿಸಿ ಎಲ್ಲಾ ವರ್ಗದವರಿಗೂ ಉದ್ಯೋಗ ದೊರೆಯಬೇಕು ಎನ್ನುವ ದೃಷ್ಟಿಯಿಂದ ನಡೆಸುತ್ತಿದ್ದೇವೆ. ಯಾವ ಕಂಪೆನಿಯನ್ನೂ ಆಯ್ದುಕೊಳ್ಳಲು ಅವಕಾಶವಿದೆ ಎಂದು ಸದಸ್ಯ ನೌಮಾನ್ ಪಟೇಲ್ ತಿಳಿಸಿದರು.
ಉದ್ಯೋಗ ಮೇಳದಲ್ಲಿ ಲೈಫ್ ಸ್ಟೈಲ್ ಗ್ರೂಪ್, ಸ್ಪಾರ್ ಸುಪರ್ ಮಾರ್ಕೆಟ್, ನೀಲಗಿರೀಸ್, ಮೊಹತೆಶಂ, ಕೋಸ್ಕಿ, ಸುಪರ್ ಬೌಲ್, ಚಾಯ್ ಪಾಯಿಂಟ್, ಗ್ರಾಂಡ್ ಮೊಡರ್ನ ಸುಪರ್ಮಾರ್ಕೆಟ್, ಕೆಫೆ ಅಮೀನ್, ಎಂ.ಎ.ರಶೀದ್, ಹೊರಿಜೋನ್ ಸಾನಿಟರಿ, ಮಾರ್ಕೆಟ್ 99, ಶೋಫ್ ಇನ್, ಶಾಬಂದ್ರಿ, ಮಾಬ್ ಎಂಡ್ ಸನ್ಸ್, ಬದರ್ ಲುಂಗೀಸ್, ಎಂ2ಎಚ್ ಇನ್ಫೋಟೆಕ್, ಎಚ್.ಆರ್.ಕ್ಯಾಟಲೈಜರ್, ಐ.ಎನ್.ಎಸ್. ಎಚ್.ಆರ್. ಕನ್ಸಲ್ಟೆನ್ಸಿ ಸೇರಿದಂತೆ ಆಸ್ಪತ್ರೆ ಮತ್ತು ಫಾರ್ಮಿಸಿ ಕೂಡಾ ಭಾಗವಹಿಸಲಿದ್ದು ತಾಲೂಕ ಹಾಗೂ ಸುತ್ತಮುತ್ತಲಿನ ಆಸಕ್ತರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ರಾಜ್ಯವೂ ಕೃಷಿ ಅವಲಂಬಿತವಾಗಿದ್ದು ಈ ನಿಟ್ಟಿನಲ್ಲಿ ಕೃಷಿ ಮಾಡುವವರಿಗಾಗಿ ಸುಳ್ಯದಿಂದವಿಶೇಷ ಕೃಷಿ ತಜ್ಞರು ಆಗಮಿಸುತ್ತಿದ್ದು ಅತ್ಯಂತ ಕಡಿಮೆ ಹಣದಿಂದ ಸಾವಯವ ಕೃಷಿಯನ್ನು ಮಾಡಿ ಕನಿಷ್ಟ ಹತ್ತು ಸಾವಿರ ರೂಪಾಯಿ ದುಡಿಯುವ ಮಾರ್ಗವನ್ನು ಅವರು ಹೇಳಿಕೊಡಲಿದ್ದು ಆಸಕ್ತ ಕೃಷಿಕರು ಕೂಡಾ ಆಗಮಿಸಬಹುದು ಎಂದು ಪೋರಂ ವತಿಯಿಂದ ತಿಳಿಸಲಾಗಿದೆ.
ಈಗಾಗಲೇ 350 ಕ್ಕೂ ಅಧಿಕ ಉದ್ಯೋಗಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಲು ರಿಜಿಸ್ಟರೇಶನ ಮಾಡಿಕೊಳ್ಳಲಾಗಿದ್ದು, ಸ್ಪಾಟ್ ರಿಜಿಸ್ಟ್ರೇಶನ ವ್ಯವಸ್ಥೆ ಸಹ ಇದೆ ಎಂದು ಪೋರಂ ವತಿಯಿಂದ ತಿಳಿಸಿದ್ದಾರೆ.
ಉದ್ಯೋಗ ಮೇಳವನ್ನು ಎಪ್ರಿಲ 27 ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಐ.ಎ.ಎಸ್., ಉದ್ಘಾಟಿಸಲಿದ್ದಾರೆ. ಉ.ಕ. ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ ಉಪಸ್ಥಿತರಿರುವರು ಎಂದೂ ತಿಳಿಸಲಾಗಿದ್ದು ಸಂಜೆ 6 ಗಂಟೆಯ ತನಕವೂ ಉದ್ಯೋಗ ಮೇಳ ನಡೆಯುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆದಿಲ್ ನಾಗರಮಠ, ಅಮೀನ್ ಅಕ್ರಮಿ, ಸಾದಾ ಖಲೀಲ್ ಮುಂತಾದವರು ಉಪಸ್ಥಿತರಿದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...