ಇಂಡೋನೇಶ್ಯ ಸುನಾಮಿ; 337ಕ್ಕೇರಿದ ಸಾವಿನ ಸಂಖ್ಯೆ

Source: sonews | By Staff Correspondent | Published on 25th December 2018, 12:17 AM | Global News | Special Report | Don't Miss |

ಇಂಡೋನೇಶ್ಯ: ಜ್ವಾಲಾಮುಖಿ ಸಿಡಿತದಿಂದ ಸಮುದ್ರ ತಳ ಕಂಪಿಸಿ ಉಂಟಾದ ಸುನಾಮಿಯಿಂದಾಗಿ ಇಂಡೋನೇಶ್ಯದಲ್ಲಿ ಮೃತಪಟ್ಟವರ ಸಂಖ್ಯೆ 373ಕ್ಕೇರಿದೆ ಹಾಗೂ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಸೋಮವಾರ ತಿಳಿಸಿದೆ.

ಅವಶೇಷಗಳಡಿಯಲ್ಲಿ ಬದುಕುಳಿದಿರಬಹುದಾದ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಸುಂದಾ ಜಲಸಂಧಿಯ ಅಂಚಿನುದ್ದಕ್ಕೂ ಶನಿವಾರ ತಡರಾತ್ರಿ ಯಾವುದೇ ಮುನ್ಸೂಚನೆಯಿಲ್ಲದೆ ಅಪ್ಪಳಿಸಿದ ಸುನಾಮಿ ಅಲೆಗಳು ನಾಶನಷ್ಟಗಳ ಸರಮಾಲೆಯನ್ನೇ ಸೃಷ್ಟಿಸಿತ್ತು.

ಬಳಿಕ ಮುನ್ನೆಚ್ಚರಿಕೆಯ ಕ್ರಮವಾಗಿ, ಸಮುದ್ರ ತೀರದಲ್ಲಿ ವಾಸಿಸುತ್ತಿರುವ 3,000ಕ್ಕೂ ಅಧಿಕ ಮಂದಿ ಎತ್ತರದ ಸ್ಥಳಗಳಿಗೆ ತೆರಳಿದರು. ಈ ಪ್ರದೇಶದಲ್ಲಿ ಮಂಗಳವಾರದವರೆಗೆ ಎತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತವೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಶೋಧ ಮತ್ತು ರಕ್ಷಣಾ ಅಧಿಕಾರಿಗಳು ಸೋಮವಾರ ಬರಿಗೈಯಿಂದಲೇ ಅವಶೇಷಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಬೃಹತ್ ಯಂತ್ರಗಳನ್ನು ಬಳಸಲಾಗುತ್ತಿದೆ. ಸರಕಾರಿ ಮತ್ತು ಸರಕಾರೇತರ ಸಂಘಟನೆಗಳ ನೆರವು ಸಾಮಗ್ರಿಗಳು ಜಾವಾದ ಪಶ್ಚಿಮ ಕರಾವಳಿಯ ಅತ್ಯಂತ ಹೆಚ್ಚು ಪೀಡಿತ ಪ್ರದೇಶ ಪಾಂಡೆಗ್ಲಂಗ್‌ಗೆ ಬರಲು ಆರಂಭಿಸಿವೆ.

ಪೆಸಿಫಿಕ್ ‘ರಿಂಗ್ ಆಫ್ ಫಯರ್’ನಲ್ಲಿ ಇಂಡೋನೇಶ್ಯ

ಇಂಡೋನೇಶ್ಯವು ಪೆಸಿಫಿಕ್ ಸಾಗರದ ಭೂಕಂಪ ವಲಯ ‘ರಿಂಗ್ ಆಫ್ ಫಯರ್’ನ ವ್ಯಾಪ್ತಿಯಲ್ಲಿ ಬರುತ್ತದೆ.ಈ ವಲಯದಲ್ಲಿ ಪದೇ ಪದೇ ಭೂಕಂಪ, ಸುನಾಮಿ ಮತ್ತು ಜ್ವಾಲಾಮುಖಿಗಳು ಸಂಭವಿಸುತ್ತಿರುತ್ತವೆ.ಈ ವರ್ಷದ ಜುಲೈ ಮತ್ತು ಆಗಸ್ಟ್‌ನಲ್ಲಿ ಪ್ರವಾಸಿ ದ್ವೀಪ ಲೊಂಬೊಕ್‌ನಲ್ಲಿ ಸರಣಿ ಭೂಕಂಪಗಳು ಸಂಭವಿಸಿದ್ದು, ದ್ವೀಪ ನೆಲಸಮಗೊಂಡಿದೆ.

ಸೆಪ್ಟಂಬರ್‌ನಲ್ಲಿ ಸುಲವೆಸಿ ದ್ವೀಪದಲ್ಲಿ ಭೂಕಂಪ ಮತ್ತು ಸುನಾಮಿ ದಾಳಿಯಿಂದಾಗಿ 2,000ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

2004ರ ಮಹಾಸುನಾಮಿಯ ನೆನಪು

ಕ್ರಿಸ್ಮಸ್‌ಗೆ ಕೇವಲ ಮೂರು ದಿನಗಳು ಇರುವಾಗ ಅಪ್ಪಳಿಸಿದ ಈ ಸುನಾಮಿಯು 2004 ಡಿಸೆಂಬರ್ 26ರಂದು ಸಂಭವಿಸಿದ ಮಹಾಸುನಾಮಿಯ ನೆನಪುಗಳನ್ನು ಜಾಗೃತಗೊಳಿಸಿದೆ.

ಹದಿನಾಲ್ಕು ವರ್ಷಗಳ ಹಿಂದೆ, ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಸುನಾಮಿಗೆ 14 ದೇಶಗಳ 2.26 ಲಕ್ಷ ಜನರು ಬಲಿಯಾಗಿದ್ದಾರೆ. ಇಂಡೋನೇಶ್ಯವೊಂದರಲ್ಲೇ 1.20 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಮಹಾ ಸುನಾಮಿಯಲ್ಲಿ ಭಾರತದಲ್ಲಿ 1,500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

Read These Next

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...