ಮಂಗಳೂರು:ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್ ಹಾಗು ಇತರೆ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರೆಯೆಗಾಗಿ ಮನಪಾ ಅಧೀನದ ಬೋಳೂರು ಸ್ಮಶಾನದಲ್ಲಿ ಸರ್ಕಾರದ ಅನುದಾನದಡಿ ರೂ. 71.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಗಾರವನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕೈಗೆತ್ತಿಕೊಂಡಿದ್ದು, ಮಹಾನಗರಪಾಲಿಕೆಯ ಮಹಾಪೌರರು ಮತ್ತು ಆಯುಕ್ತರು ಬೋಳೂರು ಸ್ಮಶಾನಕ್ಕೆ ಬೇಟಿ ನೀಡಿ ಪ್ರಗತಿಯಲ್ಲಿರುವ ವಿದ್ಯುತ್ ಚಿತಾಗಾರ ಕಾಮಗಾರಿಯನ್ನು ಪರಿಶೀಲಿಸಿದರು.
ಪ್ರಸ್ತುತ 2 ಸಂಖ್ಯೆಯ ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಈ ಪೈಕಿ ಈಗಾಗಲೇ 1 ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೊಂದು ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯು ಮುಂದಿನ 15 ದಿನಗಳಲ್ಲಿ ಸಂಪೂರ್ಣಗೊಳಿಸುವಂತೆ ಮಹಾಪೌರರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈಗಾಗಲೇ ಪೂರ್ಣಗೊಂಡಿರುವ 01 ವಿದ್ಯುತ್ ಚಿತಾಗಾರವು ಜೂನ್ 19 ರಿಂದ ಸಾರ್ವಜನಿಕರ ಬಳಕೆಗೆ ಚಾಲನೆಗೊಳಿಸಲಾಗುವುದು. ಅಲ್ಲದೆ ಸುರತ್ಕಲ್ ಪ್ರದೇಶದ ನಾಗರೀಕರಿಗೆ ಅನುಕೂಲವಾಗುವಂತೆ ಸುರತ್ಕಲ್ ಸ್ಮಶಾನದಲ್ಲಿ ರೂ. 180.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಅಭಿವೃದ್ಧಿಪಡಿಸುವ ಕಾಮಗಾರಿಗೆ ಈಗಾಗಲೇ ಮಂಜೂರಾತಿ ನೀಡಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲ್ಲಿ ಸ್ಥಳೀಯ ಮನಪಾ ಸದಸ್ಯರುಗಳಾದ ಜಗಧೀಶ್ ಶೆಟ್ಟಿ ಬೋಳೂರು ಮತ್ತು ಗಣೇಶ್ ಕುಲಾಲ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
Read These Next
ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ
ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ...
ಕಾರವಾರ: ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ...
ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...
ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ
ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಕಾರವಾರ: ಮಾರ್ಚ್ 16 ರಂದು ಜಿಲ್ಲೆಯಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ
ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವು ಮಾರ್ಚ್ 16 ರಂದು ಕಾರವಾರದ ರವೀಂದ್ರನಾಥ ಠಾಗೂರ್ ...