ವಿದ್ಯುತ್ ಚಿತಗಾರವನ್ನು ಅಭಿವೃದ್ದಿಪಡಿಸುವ ಕಾಮಗಾರಿ ಪರಿಶೀಲನೆ

Source: so news | By MV Bhatkal | Published on 20th June 2021, 11:56 AM | Coastal News |

ಮಂಗಳೂರು:ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್ ಹಾಗು ಇತರೆ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರೆಯೆಗಾಗಿ ಮನಪಾ ಅಧೀನದ ಬೋಳೂರು ಸ್ಮಶಾನದಲ್ಲಿ ಸರ್ಕಾರದ ಅನುದಾನದಡಿ ರೂ. 71.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಗಾರವನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕೈಗೆತ್ತಿಕೊಂಡಿದ್ದು,  ಮಹಾನಗರಪಾಲಿಕೆಯ ಮಹಾಪೌರರು ಮತ್ತು ಆಯುಕ್ತರು ಬೋಳೂರು ಸ್ಮಶಾನಕ್ಕೆ ಬೇಟಿ ನೀಡಿ ಪ್ರಗತಿಯಲ್ಲಿರುವ ವಿದ್ಯುತ್ ಚಿತಾಗಾರ ಕಾಮಗಾರಿಯನ್ನು ಪರಿಶೀಲಿಸಿದರು.
 ಪ್ರಸ್ತುತ 2 ಸಂಖ್ಯೆಯ ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಈ ಪೈಕಿ ಈಗಾಗಲೇ 1  ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೊಂದು ವಿದ್ಯುತ್ ಕುಲುಮೆ (ಈuಡಿಟಿಚಿಛಿe) ಯು ಮುಂದಿನ 15 ದಿನಗಳಲ್ಲಿ ಸಂಪೂರ್ಣಗೊಳಿಸುವಂತೆ  ಮಹಾಪೌರರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈಗಾಗಲೇ ಪೂರ್ಣಗೊಂಡಿರುವ 01 ವಿದ್ಯುತ್ ಚಿತಾಗಾರವು ಜೂನ್ 19 ರಿಂದ ಸಾರ್ವಜನಿಕರ ಬಳಕೆಗೆ ಚಾಲನೆಗೊಳಿಸಲಾಗುವುದು. ಅಲ್ಲದೆ ಸುರತ್ಕಲ್ ಪ್ರದೇಶದ ನಾಗರೀಕರಿಗೆ ಅನುಕೂಲವಾಗುವಂತೆ ಸುರತ್ಕಲ್ ಸ್ಮಶಾನದಲ್ಲಿ ರೂ. 180.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಅಭಿವೃದ್ಧಿಪಡಿಸುವ ಕಾಮಗಾರಿಗೆ ಈಗಾಗಲೇ ಮಂಜೂರಾತಿ ನೀಡಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.
 ಈ ಸಂದರ್ಭದಲ್ಲ್ಲಿ ಸ್ಥಳೀಯ ಮನಪಾ ಸದಸ್ಯರುಗಳಾದ ಜಗಧೀಶ್ ಶೆಟ್ಟಿ ಬೋಳೂರು ಮತ್ತು  ಗಣೇಶ್ ಕುಲಾಲ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...