ಮೌಲಾನ ಅಲಿಮೀಯಾ ರ ‘ಸಂದೇಶ ಪ್ರಚಾರ ಮತ್ತು ಸುಧಾರಣಾ ಕ್ರಮ’ದ ಕುರಿತ ರಾಷ್ಟ್ರೀಯ ಸೆಮಿನಾರ್ 

Source: sonews | By Staff Correspondent | Published on 7th February 2018, 3:56 PM | Coastal News | State News | National News | Special Report | Don't Miss |

* 300ಕ್ಕೂ ಹೆಚ್ಚು ವಿದ್ವಾಂಸರು, ಚಿಂತಕರು ಉಪಸ್ಥಿತಿ
* 88 ಪ್ರಬಂಧಗಳ ಮಂಡನೆ

ಭಟ್ಕಳ: ಜಗತ್ತು ಕಂಡ ಅಪ್ರತಿಮ ವಿದ್ವಾಂಸರಲ್ಲಿ ನದ್ವತುಲ್ ಉಲೇಮಾದ ಸಂಸ್ಥಾಪಕ, ಅಖಿಲಾ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‍ನ ಸ್ಥಾಪಕಾಧ್ಯಕ್ಷ ದಿವಂಗತ ಮೌಲಾನ ಸೈಯ್ಯದ್ ಅಬುಲ್ ಹಸನ್ ಅಲಿ ಹಸನಿ ನದ್ವಿ (ಅಲಿಮೀಯಾ) ರ ಹೆಸರು ಮುಂಚೂಣಿಯಲ್ಲಿದ್ದು ಇವರ ಸಂದೇಶ ಪ್ರಚಾರ ಹಾಗೂ ಸುಧಾರಣಾ ಕಾರ್ಯಗಳ ಕುರಿತಂತೆ ಆಲಮಿ ರಾಬ್ತೆ ಅದಬೆ ಇಸ್ಲಾಮಿ ವತಿಯಿಂದ ಇಲ್ಲಿನ ಜಾಮಿಯಾ ಇಸ್ಲಾಮೀಯ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆದಿದ್ದು, ದೇಶದ ನಾನಾ ರಾಜ್ಯಗಳಿಂದ 300ಕ್ಕೂ ಹೆಚ್ಚು ವಿದ್ವಾಂಸರು, ಚಿಂತಕರು, ಶಿಕ್ಷಣ ತಜ್ಞರು ಭಾಗವಹಿಸಿ ಸುಮಾರು 88ಕ್ಕು ಅಧಿಕ ಆಗ್ರ ಪ್ರಬಂಧಗಳನ್ನು ಮಂಡಿಸಿದರು. 

ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಇಸ್ಲಾಮಿ ಚಿಂತಕ ಹಝರತ್ ಮೌಲಾನ ಅಬುಲ್ ಹಸನ್ ನದ್ವಿ ಹುಟ್ಟುಹಾಕಿದ ಚಿಂತನೆಗಳು, ಅವರ ಕಾರ್ಯಸಾಧನೆಯನ್ನು ಮುನ್ನೆಡೆಸಿಕೊಂಡು ಹೋಗುವ ಪಣ ತೊಟ್ಟಿದ್ದು ಅವರ ಬದುಕು ಸಾರ್ವತ್ರಿಕ ಹಾಗೂ ಪ್ರಯೋಗಿಕವಾಗಿತ್ತು ಎನ್ನುವ ಮಾತು ವಿದ್ವಾಂಸರಿಂದ ಬಂದವು. ಮೌಲಾನರು, ಯುವ ಸಮುದಾಯಗಳಲ್ಲಿ ಹೆಚ್ಚುತ್ತಿರುವ ನಾಸ್ತಿಕತೆ ಧರ್ಮಭ್ರಷ್ಟತೆಯನ್ನು ಬಲವಾಗಿ ಎದುರಿಸಿದ್ದರು. ಅವರು ಅತ್ಯಂತ ಮೃದು ಸ್ವಭಾವದವರಾಗಿದ್ದರೂ ಸುಧಾರಣೆಯ ದೃಷ್ಟಿಯಿಂದಾಗಿ ಕೆಲವೊಮ್ಮೆ ಕಠೋರರಾಗುತ್ತಿದ್ದರು. ತಮ್ಮ ಲೇಖನಿ, ಭಾಷಣಗಳ ಮೂಲಕ ಜಗತ್ತಿನ ಎಲ್ಲ ಸಮುದಾಯಗಳ ಹೃದಯವನ್ನು ಗೆದ್ದುಕೊಂಡಿದ್ದರು. ತಮ್ಮ ಕೊನೆಯ ಉಸಿರಿರುವ ತನಕ ಇಸ್ಲಾಂ ಧರ್ಮದ ಏಳಿಗೆಗಾಗಿ ಶ್ರಮಿಸಿದ್ದಾರೆ. ಇವರನ್ನು ಇಸ್ಲಾಮಿ ಚಿಂತಕರನ್ನಾಗಿ ಮಾಡುವಲ್ಲಿ ತಾಯಿಯ ಪ್ರಾರ್ಥನೆ, ನಿಸ್ವಾರ್ಥ ಸೇವೆ, ಮತ್ತು ಅಲ್ಲಾಹನ ಅನುಗ್ರಹ. ಇವುಗಳಿಂದಾಗಿಯೇ ಅವರು ಜಗತ್ವಿಖ್ಯಾತರಾದರು ಎಂಬ ಅಭಿಪ್ರಾಯವು ಪ್ರಬಂಧಗಳಲ್ಲಿ ಮೂಡಿಬಂದಿದೆ. 

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಖಿಲಾ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಅಧ್ಯಕ್ಷ ಮೌಲಾನ ಸೈಯ್ಯದ್ ಮುಹಮ್ಮದ್ ರಾಬೆಅ ಹಸನಿ ನದ್ವಿ ವಹಿಸಿದ್ದರು. ವಿದ್ವಾಂಸರಾದ ಮೌಲಾನ ಉಮ್ರಿನ್ ಮಹಫೂಝ್ ರಹ್ಮಾನಿ, ಮೌಲಾನ ಖಾಲಿದ್ ಗಾಝಿಪುರಿ ನದ್ವಿ, ಮೌಲಾನ ಸಲ್ಮಾನ್ ಹುಸೇನಿ ನದ್ವಿ, ಮತ್ತಿತರರು ಉಪಸ್ಥಿತರಿದ್ದರು ಮೌಲಾನ ಅಲಿಮೀಯರ ಸಂದೇಶ ಪ್ರಚಾರ ಮತ್ತು ಸುಧಾರಣಾ ಕಾರ್ಯದ ಕುರಿತಂತೆ ಬೆಳಕುಚೆಲ್ಲಿದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...