ನಗದು ಬಹುಮಾನಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Source: sonews | By Staff Correspondent | Published on 30th May 2020, 4:48 PM | Coastal News |

ಕಾರವಾರ:  ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ರಾಜ್ಯ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗದು ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಜಿಲ್ಲೆಯ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧ ಪಟ್ಟ ಅಂಗಿಕೃತ ಕ್ರೀಡಾ ಸಂಸ್ಥೆಗಳಿಂದ ಅಥವಾ ಕರ್ನಾಟಕ ಕ್ರೀಡಾ ಪ್ರಾಧಿಕಾರ ಶಿಫಾರಸ್ಸಿನೊಂದಿಗೆ ಜೂನ್ 20 ರೊಳಗಾಗಿ ಅಗತ್ಯ  ದಾಖಲೆಗಳನ್ನು ಲಗತ್ತಿಸಿ  ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ  ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಕ್ರೀಡಾ ಇಲಾಖೆಯನ್ನು ಭೇಟಿ ಮಾಡಬಹುದಾಗಿರುತ್ತದೆ ಎಂದು ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next