ಕಾರವಾರ: ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಮಸ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ವಿಶೇಷ ಅಗತ್ಯತೆಯುಳ್ಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಮಸ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಥಮಿಕ ಬಿಐಇಆರ್ಟಿ ಹುದ್ದೆಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ಪೇಷಲ್ ಡಿಎಡ್ ಅಥವಾ ಎಮ್ಸಿಟಿಟಿ ವಿದ್ಯಾರ್ಹತೆ ಹೊಂದಿರಬೇಕು. ಪ್ರೌಢಶಾಲಾ ಬಿಐಇಆರ್ಟಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಪೇಷಲ್ ಬಿಎಡ್ ವಿದ್ಯಾರ್ಹತೆ ಹೊಂದಿರಬೇಕು. ಎರಡೂ ಹುದ್ದೆಗಳಿಗೆ ಆರ್ ಸಿ ಐ ಪ್ರಮಾಣ ಪತ್ರ ಹೊಂದಿರುವುದು ಅವಶ್ಯಕ.
ಆಸಕ್ತರು ಜೂ 22 ರೊಳಗಾಗಿ ಉಪ ನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷ ಕರ್ನಾಟಕ ಶೈಕ್ಷಣಿಕ ಜಿಲ್ಲೆ ಶಿರಸಿ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ 9880280127 ಅಥವಾ ದೂ 08384-134512 ನ್ನು ಸಂಪರ್ಕಿಸಬಹುದಾಗಿದೆ ಎಂದು ಶಿರಸಿಯ ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.