ಶಿರಸಿ: ನಗರದ ಮರಾಠಿಕೊಪ್ಪ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ಇಬ್ಬರನ್ನ ಬಂಧಿಸಿದ್ದಾರೆ. ಚಂದ್ರಶೇಖರ ಗಣಪತಿ ಪಟಗಾರ ಮರಾಠಿಕೊಪ್ಪ, ಕಿರಣ ಗಣಪತಿ ಪಟಗಾರ ಮರಾಠಿಕೊಪ್ಪ ಬಂಧಿತರಾಗಿದ್ದಾರೆ. ಆರೋಪಿತರಿಂದ
11295 ರೂ. ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ ಎರಡು ಮೊಬೈಲ್ ಗಳನ್ನು ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಎಸ್ಪಿ ಶಿವಪ್ರಕಾಶ್ ದೇವರಾಜು ಸೂಚನೆ ಮೇರೆಗೆ ಶಿರಸಿ ಸಿಪಿಐ ಬಿ.ಯು ಪ್ರದೀಪ್ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ಅವರು ತಮ್ಮ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು.