ಹೆಲಿಕಾಪ್ಟರ್‌ ದುರಂತ; ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಮೃತ್ಯು-ವರದಿ

Source: SOnews | By Staff Correspondent | Published on 20th May 2024, 2:37 PM | National News | Global News |

ಹೊಸದಿಲ್ಲಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರಯೀಸಿ ಮತ್ತು ಅವರ ವಿದೇಶ ಸಚಿವ ಹುಸೇನ್‌ ಅಮೀರ ಅಬ್ದೊಲ್ಲಾಹಿಯಾನ್‌ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ ‌ಅಧಿಕಾರಿಯೊಬ್ಬರು ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾಗಿ ವರದಿಯಾಗಿದೆ.

ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್ ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ.  

ಹೆಲಿಕಾಪ್ಟರ್‌ ಪತನಗೊಂಡ ಸ್ಥಳದ ವೀಡಿಯೋ ಫುಟೇಜ್‌ ಕೂಡ ಲಭ್ಯವಾಗಿದೆ. ಹೆಲಿಕಾಫ್ಟರ್ ನಲ್ಲಿ ಅಧ್ಯಕ್ಷ ರಯೀಸಿ, ವಿದೇಶ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಮತ್ತು ಇತರ ಅಧಿಕಾರಿಗಳಿದ್ದರು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು.   ಆರಂಭಿಕ ವರದಿಗಳ ಪ್ರಕಾರ ಇದೊಂದು ಅಪಘಾತವೆಂದು ಇರಾನ್‌ ಸ್ಟೇಟ್‌ ಮಾದ್ಯಮ ವರದಿ ಮಾಡಿದೆ.

ಅಧ್ಯಕ್ಷರ ತಂಡದಲ್ಲಿದ್ದ ಇಬ್ಬರು ರಕ್ಷಣಾ ತಂಡವನ್ನು ಸಂಪರ್ಕಿಸಿದ್ದರು ಎಂದ ಎಕ್ಸಿಕ್ಯುಟಿವ್‌ ಅಫೇರ್ಸ್‌ ಉಪಾಧ್ಯಕ್ಷ ಮುಹ್ಸಿನ್ ಮನ್ಸೂರಿ ಹೇಳಿದ್ದಾರೆ.  ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿಗಳ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕಠಿಣ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.  ಇರಾನ್‌ನ ಸುದ್ದಿ ಸಂಸ್ಥೆ ಐಆರ್‌ಎನ್ ಎ ಅಧ್ಯಕ್ಷರ ಪತನಗೊಂಡ ಹೆಲಿಕಾಪ್ಟರ್‌ ಫುಟೇಜ್‌ ಬಿಡುಗಡೆಗೊಳಿಸಿದೆ.  ಹೆಲಿಕಾಪ್ಟರ್‌ನ ಸಂಪೂರ್ಣ ಕ್ಯಾಬಿನ್‌ ಸುಟ್ಟು ಹೋಗಿದೆ. ಕೆಲ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿವೆ ಎಂದು ವರದಿಯಾಗಿದೆ.

Read These Next

ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ

ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ...

ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ

ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ...

ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ

ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...