ಕೊರೋನಾ ಚಿಕಿತ್ಸೆಗಾಗಿ ತನ್ನ ಐದು ಆಸ್ಪತ್ರೆಗಳಲ್ಲಿ 1,000 ಹಾಸಿಗೆಗಳನ್ನು ಮೀಸಲಿಟ್ಟ ಜಮಾಅತೆ ಇಸ್ಲಾಮೀ ಹಿಂದ್ ;10 ಸಾವಿರ ಸ್ವಯಂ ಸೇವಕರು ಸಕ್ರಿಯ

Source: sonews | By Staff Correspondent | Published on 28th March 2020, 10:42 PM | National News | Don't Miss |

ಕೇರಳ:  ಕೇರಳದಲ್ಲಿ ಕೊರೋನಾವನ್ನು ಎದುರಿಸಲು ಮುಖ್ಯಮಂತ್ರಿ ಪಿಣರಾಯಿ ಸರಕಾರ ಪ್ರಶಂಸಾರ್ಹ ಕ್ರಮಗಳನ್ನು ಕೈಗೊಳ್ಳುತ್ತಿರುವುದರ ನಡುವೆಯೇ ವಿವಿಧ ಧಾರ್ಮಿಕ ಸಂಘಟನೆಗಳೂ ಸರಕಾರದೊಂದಿಗೆ ಕೈಜೋಡಿಸುತ್ತಿವೆ. ವಿಶೇಷವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕೇರಳ ಘಟಕವು ದೊಡ್ಡ ಮಟ್ಟದಲ್ಲಿ ನೆರವಿಗೆ ಧಾವಿಸಿದ್ದು, ತನ್ನ ಅಧೀನದ ಟ್ರಸ್ಟ್'ನಿಂದ ನಡೆಸಲ್ಪಡುತ್ತಿರುವ ಆಸ್ಪತ್ರೆಯನ್ನೇ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಿದೆ ಮತ್ತು ಇದು ಸರಕಾರಕ್ಕೆ ಆನೆಬಲ ಒದಗಿಸಿದಂತಾಗಿದೆ.

ಕೋಝಿಕೋಡ್ ನಲ್ಲಿರುವ ಶಾಂತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 300 ಹಾಸಿಗೆಗಳ ಸೌಲಭ್ಯವಿದ್ದು, ಅದನ್ನು ಚಿಕಿತ್ಸೆಗೆ ಪೂರಕವಾಗಿ ಬಳಸಿಕೊಳ್ಳಲು ಸರಕಾರಕ್ಕೆ ಅನುವು ಮಾಡಿ ಕೊಡಲಾಗುತ್ತಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕೇರಳ ಘಟಕದ ಮಾಧ್ಯಮ ತಂಡದ ಸದಸ್ಯ ಟಿ.ಶಾಕಿರ್ ಹೇಳಿದ್ದಾರೆ.

ಕೇರಳದಾದ್ಯಂತ ಇರುವ ಐದು ಆಸ್ಪತ್ರೆಗಳಲ್ಲಿ 1,000 ಹಾಸಿಗೆಗಳನ್ನು ಈ ಚಿಕಿತ್ಸೆಗಾಗಿ ಜಮಾಅತ್ ಒದಗಿಸಲಿದ್ದು, ಐಸೋಲೇಷನ್ ಮತ್ತು ಕ್ವಾರಂಟೈನ್'ಗಾಗಿ ಸರಕಾರವು ಜಮಾಅತ್ ನ 90 ಶಾಲಾ ಕಟ್ಟಡಗಳು, 25 ಕಾಲೇಜು ಕಟ್ಟಡಗಳು ಮತ್ತು 400 ಮದರಸಾಗಳನ್ನು ಬಳಸಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ. ಹಾಗೆಯೇ, ಕೊರೋನಾ ವಿರೋಧಿ ಹೋರಾಟದಲ್ಲಿ ಜಮಾಅತ್ ನ 10 ಸಾವಿರ ಸ್ವಯಂ ಸೇವಕರು ಸಕ್ರಿಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...