ಜೈಶ್ರೀರಾಂ ಹೇಳುವಂತೆ ಒತ್ತಾಯಿಸಿ ಮುಸ್ಲಿಮರನ್ನು ಥಳಿಸಿದ ದುಷ್ಕರ್ಮಿಗಳಿಂದ ಸಂತೃಸ್ತರನ್ನು ರಕ್ಷಿಸಿದ ಹಿಂದೂ ದಂಪತಿ

Source: sonews | By Staff Correspondent | Published on 20th July 2019, 3:57 PM | National News | Don't Miss |

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಥಳಿಸಿ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತಪಡಿಸಿದ ಘಟನೆ ನಡೆದಿದ್ದು, ಹಿಂದೂ ದಂಪತಿಯೊಂದು ಕೂಡಲೇ ರಕ್ಷಣೆಗೆ ಧಾವಿಸಿ ಆತನ ಪ್ರಾಣವುಳಿಸಿದೆ.

ಸಂತ್ರಸ್ತ ಇಮ್ರಾನ್ ಇಸ್ಮಾಯಿಲ್ ಪಟೇಲ್ ಹೋಟೆಲ್ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಗೆ ಹಿಂದಿರುಗುತ್ತಿದ್ದಾಗ ಬೇಗಂಪುರ ಪ್ರದೇಶದ ಹುಡ್ಕೊ ಕಾರ್ನರ್ ಸಮೀಪ ಸುಮಾರು ಹತ್ತು ಮಂದಿ ದುಷ್ಕರ್ಮಿಗಳಿದ್ದ ತಂಡ ತಡೆದು ನಿಲ್ಲಿಸಿ ಥಳಿಸಿತ್ತು. ನಂತರ ಮೂರು ಬಾರಿ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತಪಡಿಸಿದೆ.

ಅಲ್ಲಿಯೇ ಹತ್ತಿರದಲ್ಲಿ ವಾಸಿಸುತ್ತಿದ್ದ ಹಿಂದೂ ದಂಪತಿ ಇಸ್ಮಾಯೀಲ್ ರ ಬೊಬ್ಬೆ ಕೇಳಿ ತಮ್ಮ ಮನೆಯಿಂದ ಹೊರಗೆ ಧಾವಿಸಿ ಆತನನ್ನು ರಕ್ಷಿಸಿದ್ದಾರಲ್ಲದೆ, ಏನೂ ಮಾಡದಂತೆ ದಾಳಿಕೋರರನ್ನು ವಿನಂತಿಸಿದ್ದಾರೆ. ನಂತರ ದಾಳಿಕೋರರ ಕೈಯಲ್ಲಿದ್ದ ಇಮ್ರಾನ್ ಬೈಕ್ ನ ಕೀಯನ್ನು ದಾಳಿಕೋರರಿಂದ ಬೇಡಿ ಪಡೆದು ಅದನ್ನು ಇಸ್ಮಾಯೀಲ್ ಗೆ ಹಿಂದಿರುಗಿಸಿ ಆತ ಸುರಕ್ಷಿತವಾಗಿ ಮನೆಗೆ ತೆರಳುವಂತೆ ದಂಪತಿ ನೋಡಿಕೊಂಡಿದ್ದಾರೆ.

ತಮ್ಮ ವಿರುದ್ಧ ದಾಳಿಕೋರರು ಪ್ರತೀಕಾರ ತೆಗೆದುಕೊಳ್ಳಬಹುದೆಂಬ ಭಯದಿಂದ ಘಟನೆಯ ನಂತರ ದಂಪತಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಐಪಿಸಿ ಸೆಕ್ಷನ್ 153ಎ ಹಾಗೂ 144 ಅನ್ವಯ ಪ್ರಕರಣ ದಾಖಲಿಸಲಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...