“ಲವ್ ಜಿಹಾದ್ ತಿಳಿಯಲು ವಿದ್ಯಾರ್ಥಿ, ಶಿಕ್ಷಕ ರಿಗೆ ಆಧ್ಯಾತ್ಮಿಕ ಮೇಳ 

Source: sonews | By Staff Correspondent | Published on 19th November 2017, 7:36 PM | National News | Don't Miss |

ಜೈಪುರ: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ‘ಲವ್ ಜಿಹಾದ್’ ಬಗ್ಗೆ ತಿಳಿದುಕೊಳ್ಳಲು ಅವರನ್ನು ಇಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಮೇಳಕ್ಕೆ ಕಳುಹಿಸುವಂತೆ ರಾಜಸ್ಥಾನ ಸರಕಾರವು ಜೈಪುರದಲ್ಲಿನ ಶಾಲೆಗಳಿಗೆ ಸೂಚಿಸಿದೆ.

 

ಹಿಂದು ಆಧ್ಯಾತ್ಮಿಕ ಮತ್ತು ಸೇವಾ ಮೇಳದ ಸಂಘಟಕರು ಸರಕಾರಿ ಮತ್ತು ಖಾಸಗಿ ಶಾಲೆಗಳನ್ನು ಸಂಪರ್ಕಿಸಿ ಮೇಳದಲ್ಲಿ ಪಾಲ್ಗೊಳ್ಳುವಂತೆ ಕೇಳಿಕೊಳ್ಳುತ್ತಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಾಸುದೇವ ದೇವ್ನಾನಿ ಅವರ ನಿರ್ದೇಶದ ಮೇರೆಗೆ ಮೇಳವನ್ನು ನಡೆಸಲಾಗುತ್ತಿದ್ದು, ಮೇಳದ ಸಂಘಟಕರಿಗೆ ನೆರವಾಗುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಜೈಪುರದ ಹೆಚ್ಚುವರಿ ಜಿಲ್ಲಾ ಶಿಕ್ಷಣಾಧಿಕಾರಿ ದೀಪಕ್ ಶುಕ್ಲಾ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಇಲ್ಲಿ ಮೇಳ ಮುಖ್ಯವಲ್ಲ, ಅಲ್ಲಿ ಏನು ನಡೆಯುತ್ತಿದೆ ಎನ್ನುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ‘ಲವ್ ಜಿಹಾದ್’ ಬಗ್ಗೆ ತಿಳಿದುಕೊಳ್ಳಲು ಈ ಮೇಳವನ್ನು ಆಯೋಜಿಸಲಾಗಿದೆ. ಸಸ್ಯಾಹಾರಿಗಳಾಗುವುದಾಗಿ ಶಪಥ ತೊಡುವಂತೆ ವಿದ್ಯಾರ್ಥಿಗಳಿಗೆ ಮೇಳದಲ್ಲಿ ಸೂಚಿಸಲಾಗುತ್ತಿದ್ದು, ಆಕಳನ್ನು ‘ರಾಷ್ಟ್ರ ಮಾತೆ ಎಂದು ಘೋಷಿಸುವಂತೆ ಆಗ್ರಹವೂ ಕೇಳಿ ಬರುತ್ತಿದೆ.

ವಿದ್ಯಾರ್ಥಿಗಳು ಸಾಮಾಜಿಕ ಪರಿವರ್ತನೆಯ ಭಾಗವಾಗಲು ಅವರಿಗೆ ನೆರವಾಗುವ ಮತ್ತು ಈ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಘಟನೆಗಳಿಗೆ ವೇದಿಕೆಯನ್ನೊದಗಿಸುವ ಉದ್ದೇಶದೊಂದಿಗೆ ನಡೆಯುತ್ತಿರುವ ಐದು ದಿನಗಳ ಮೇಳ ನ.20ರಂದು ಮುಕ್ತಾಯ ಗೊಳ್ಳಲಿದೆ. ರಾಷ್ಟ್ರಪ್ರೇಮವೂ ಮೇಳದ ಆಶಯಗಳಲ್ಲೊಂದಾಗಿದೆ.

 ಮೇಳದಲ್ಲಿ ‘ಲವ್ ಜಿಹಾದ್’ ಕುರಿತು ವಿತರಿಸಲಾಗುತ್ತಿರುವ ಕರಪತ್ರದಲ್ಲಿ ಸೈಫ್ ಅಲಿ ಖಾನ್ ಮತ್ತು ಆಮಿರ್ ಖಾನ್ ಅವರಂತಹ ನಟರು ಹಿಂದು ಮಹಿಳೆಯರನ್ನು ಹೇಗೆ ‘ಬುಟ್ಟಿಗೆ ಹಾಕಿಕೊಂಡಿದ್ದಾರೆ’ ಎನ್ನುವುದನ್ನು ಹೇಳುತ್ತಿದೆ. ಮತಾಂತರಗೊಳ್ಳುವ ಬದಲು ಹುಟ್ಟಿದ ಧರ್ಮದಲ್ಲಿಯೇ ಸಾಯುವುದು ಒಳ್ಳೆಯದು ಎಂದು ಹೇಳಿರುವ ಈ ಕರಪತ್ರದಲ್ಲಿ, ಬ್ಯೂಟಿ ಪಾರ್ಲರ್‌ಗಳು, ಮೊಬೈಲ್ ರೀಚಾರ್ಜ್ ಅಂಗಡಿಗಳು, ಮಹಿಳೆಯರ ಟೈಲರ್‌ಗಳು, ಮುಸ್ಲಿಂ ವ್ಯಾಪಾರಿಗಳ ಸ್ಥಳ ಇತ್ಯಾದಿಗಳು ಸೇರಿದಂತೆ ‘ಲವ್ ಜಿಹಾದ್’ ನಡೆಯುವ ತಾಣಗಳನ್ನು ಪಟ್ಟಿ ಮಾಡಲಾಗಿದೆ.

ಕ್ರೈಸ್ತ ಮಿಷನರಿಗಳ ಕುರಿತ ಇನ್ನೊಂದು ಕರಪತ್ರವೂ ಮೇಳದಲ್ಲಿ ವಿತರಣೆಯಾಗುತ್ತಿದ್ದು, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶಗಳು ಕ್ರಿಶ್ಚಿಯನ್ ಬಾಹುಳ್ಯದ ರಾಜ್ಯಗಳಾಗಿದ್ದು ಹೇಗೆ ಎನ್ನುವುದನ್ನು ವಿವರಿಸಲಾಗಿದೆ. ಭಯೋತ್ಪಾದಕ ತರಬೇತಿ ಕೇಂದ್ರಗಳನ್ನೂ ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೇಳದಲ್ಲಿ ಭಾರತೀಯ ಹಿಂದು ಸೇನಾದ ಮಳಿಗೆಯೂ ಇದ್ದು, ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುವ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮೇಳಕ್ಕೆ ಬರುವವರನ್ನು ಅದು ಆಗ್ರಹಿಸುತ್ತಿದೆ. ಗೋರಕ್ಷಾ ಸೇವಾ ಸಂಸ್ಥಾನದ ಕೆಲವು ಮಳಿಗೆಗಳು ಜೆರ್ಸಿ ಹಸುಗಳ ಹಾಲಿನ ಕೆಡುಕುಗಳನ್ನು ವಿವರಿಸುವ ಕರಪತ್ರಗಳನ್ನು ಜನರಿಗೆ ಹಂಚುತ್ತಿವೆ. ಭಾರತೀಯ ಗೋ ಕ್ರಾಂತಿ ಮಂಚ್ ಹೆಸರಿನ ಇನ್ನೊಂದು ಮಳಿಗೆಯು ಗೋವನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸುವಂತೆ ಒತ್ತಾಯಿಸುವ ಅಭಿಯಾನವನ್ನು ನಡೆಸುತ್ತಿದೆ. ಜೊತೆಗೆ ಕೇಂದ್ರ ಗೋ ಸಚಿವಾಲಯವನ್ನು ಸ್ಥಾಪಿಸುವಂತೆ ಮತ್ತು ಗೋಹಂತಕರಿಗೆ ಮರಣ ದಂಡನೆ ವಿಧಿಸುವಂತೆಯೂ ಅದು ಬೇಡಿಕೆಯನ್ನು ಮಂಡಿಸಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...