ಆಸಿಫಾಗೆ ನ್ಯಾಯದ ಬೆಳಕಾದ ಕಾಶ್ಮೀರಿ ಪಂಡಿತರು

Source: sonews | By Staff Correspondent | Published on 13th April 2018, 5:23 PM | National News | Don't Miss |

ಜಮ್ಮು: ಅತ್ಯಾಚಾರದಂತಹ ಹೀನ ಅಪರಾಧಗಳಿಗೆ ಯಾವುದೇ ಧರ್ಮವಿಲ್ಲ ಎಂದು ಹೇಳುತ್ತಾರೆ ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆಸಿಫಾ ಪರ ವಾದಿಸಲಿರುವ ಕಾಶ್ಮೀರಿ ಪಂಡಿತ್ ವಕೀಲೆ ದೀಪಿಕಾ ಸಿಂಗ್ ರಾಜವತ್. 38 ವರ್ಷದ ದೀಪಿಕಾ ಸಿಂಗ್ ಅವರ ಕಾಶ್ಮೀರಿ ಪಂಡಿತ್ ಕುಟುಂಬ 1986ರಲ್ಲಿ ಉತ್ತರ ಕಾಶ್ಮೀರದಿಂದ ಜಮ್ಮುವಿಗೆ ಸ್ಥಳಾಂತರಗೊಂಡಿತ್ತು. 

ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ದೀಪಿಕಾ ಸಿಂಗ್ ರದ್ದು ಬಹುಮುಖ್ಯ ಪಾತ್ರ. ಈ ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಅವರಿಗೆ ಬೆದರಿಕೆಯೊಡ್ಡಲಾಗುತ್ತಿದೆ. ಎಪ್ರಿಲ್ 4ರಂದು ಜಮ್ಮು ಹೈಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಭುಪಿಂದರ್ ಸಿಂಗ್ ಸಲಥಿಯಾ ತನಗೆ ಬೆದರಿಕೆಯೊಡ್ಡಿದ್ದಾರೆ ಹಾಗೂ  ನ್ಯಾಯಾಲಯಕ್ಕೆ ಹಾಜರಾಗದಂತೆ ಧಮ್ಕಿ ಹಾಕಿದ್ದಾರೆ ಎಂದು ದೀಪಿಕಾ ಆರೋಪಿಸಿದ್ದಾರೆ.

ವಿಚಾರಣಾ ನ್ಯಾಯಾಲಯಗಳ ಮಹಿಳಾ ವಕೀಲರ ಕೊಠಡಿಯಲ್ಲಿ ತನಗೆ ನೀರು ಕೂಡ ನೀಡದಂತೆ ಅಲ್ಲಿನ ಸಹಾಯಕರಿಗೆ ಹೇಳಲಾಗಿದೆ ಎಂದು ರಾಜವತ್ ಎಪ್ರಿಲ್ 9ರಂದು ತಮ್ಮ ಫೇಸ್ ಬುಕ್ ಪುಟದಲ್ಲಿ ಆರೋಪಿಸಿದ್ದರು. "ಮಹಿಳೆಯೊಬ್ಬಳಿಗೆ ಬೆದರಿಸಿದ ಮಾತ್ರಕ್ಕೆ ಆಕೆ ಹೆದರಿ ಅಡಗಿ ಕುಳಿತು ಬಿಡುತ್ತಾಳೆ ಎಂದು ಅವರು ಅಂದುಕೊಂಡಿದ್ದಾರೆ. ಆದರೆ ಈ ಮಹಿಳೆ ಹೆದರುವವಳಲ್ಲ ಎಂದು ಅವರಿಗೆ ತಿಳಿದಿಲ್ಲ. ಈ ಮಹಿಳೆ ಒಬ್ಬ ಮನುಷ್ಯಳಾಗಿರುವುದರಿಂದ ಆಕೆ ಹಿಂದೂ, ಮುಸಲ್ಮಾನ, ಮುಸ್ಲಿಂ, ಸಿಕ್ಖ್ ಯಾರಿಗೆ ಬೇಕಾದರೂ ಸಹಾಯ ಮಾಡುತ್ತಾಳೆ. ನನಗೂ ಐದು ವರ್ಷದ ಮಗಳಿದ್ದಾಳೆ, ಸಲಥಿಯಾ ಅವರ ಮನೆಯಲ್ಲೂ ಅವರ ಪುತ್ರಿಯಿದ್ದಾರೆ'' ಎಂದು ದೀಪಿಕಾ ಹೇಳುತ್ತಾರೆ.

ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಹೆಡೆಮುರಿಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ರಮೇಶ್ ಕುಮಾರ್ ಜಲ್ಲಾ ಕೂಡ ಕಾಶ್ಮೀರಿ ಪಂಡಿತ್. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ 90 ದಿನಗಳ ಗಡುವಿಗೂ ಮೊದಲೇ ವಿಚಾರಣೆಯನ್ನು ಪೂರ್ಣಗೊಳಿಸಿ ಎಲ್ಲಾ ಆರೋಪಿಗಳನ್ನು ಬಂಧಿಸಿ ಚಾರ್ಜ್ ಶೀಟ್ ಸಲ್ಲಿಸಿದ ಇವರು ಕ್ರೈಂ ಬ್ರಾಂಚ್ ಅಧಿಕಾರಿ. ಆರೋಪಿಗಳ ರಕ್ಷಣೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರಿಂದ ಈ ಪೊಲೀಸ್ ಅಧಿಕಾರಿಗೆ ಭಾರೀ ಒತ್ತಡವಿದೆ ಎನ್ನಲಾಗಿದೆ. ಆದರೆ ಇದ್ಯಾವುದಕ್ಕೂ ಜಗ್ಗದ ಅಧಿಕಾರಿ ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...