ಯುಎಸ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್ :3ನೇ ಬಾರಿ ಗ್ರಾಂಡ್ ಸ್ಲಾಂ ಕಿರೀಟ ಗೆದ್ದ ಜಪಾನ್ ನ ನವೋಮಿ ಒಸಾಕಾ

Source: AFP | Published on 13th September 2020, 7:54 PM | Sports News | Don't Miss |

ನ್ಯೂಯಾರ್ಕ್: ಯುಎಸ್ ಮುಕ್ತ ಟೆನಿಸ್ ನ ಮಹಿಳೆಯರ ಸಿಂಗಲ್ಸ್ ಅಂತಿಮ ಪಂದ್ಯದಲ್ಲಿ ಬೆಲಾರಸ್ ನ ವಿಕ್ಟೋರಿಯಾ ಅಜರೆಂಕಾ ಅವರನ್ನು ಸೋಲಿಸುವ ಮೂಲಕ ಜಪಾನ್ ನ ನವೋಮಿ ಒಸಾಕಾ ಸತತ ಮೂರನೇ ಬಾರಿಗೆ ಗ್ರಾಂಡ್ ಸ್ಲಾಮ್ ಕಿರೀಟವನ್ನು ಗೆದ್ದಿದ್ದಾರೆ.
1994ರ ನಂತರ ಯುಎಸ್ ಓಪನ್ ಸಿಂಗಲ್ಸ್ ಅಂತಿಮ ಪಂದ್ಯವನ್ನು ಗೆದ್ದ ಮೊದಲ ಮಹಿಳೆಯಾಗಿದ್ದಾರೆ. ವಿಶ್ವ ಟೆನ್ನಿಸ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಚೀನಾದ ಲಿ ನಾ ಅವರ ಎರಡು ಗ್ರಾಂಡ್ ಸ್ಲಾಂ ಪ್ರಶಸ್ತಿಯನ್ನು ಹಿಂದಿಕ್ಕಿ ಮೂರು ಗ್ರಾಂಡ್ ಸ್ಲಾಂ ಪ್ರಶಸ್ತಿ ಗಳಿಸಿದ ಏಷ್ಯಾ ಖಂಡದ ಮೊದಲ ಆಟಗಾರ್ತಿಯಾಗಿದ್ದಾರೆ.
ನ್ಯೂಯಾರ್ಕ್ ನ ಅರ್ತುರ್ ಅಶೆ ಕ್ರೀಡಾಂಗಣದಲ್ಲಿ ನಿನ್ನೆ ಮುಕ್ತಾಯವಾದ ಪಂದ್ಯದಲ್ಲಿ ಒಸಾಕಾ ಅವರು ಅಜರೆಂಕಾ ಅವರನ್ನು 1-6,6-3,6-3 ಸೆಟ್ ಗಳಿಂದ ಮಣಿಸಿದ್ದಾರೆ.
ಒಸಾಕಾ ಅವರು ಈ ಹಿಂದೆ 2018ರಲ್ಲಿ ಅಮೆರಿಕ ಮುಕ್ತ ಮತ್ತು 2019ರಲ್ಲಿ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಸರಣಿಯನ್ನು ಸಹ ಗೆದ್ದಿದ್ದರು. ನಾನು ಪಂದ್ಯವನ್ನು ಸಂತೋಷದಿಂದ ಅನುಭವಿಸಲಿಲ್ಲ, ಇದು ನಿಜಕ್ಕೂ ಕಠಿಣ ಸವಾಲಿನ ಪಂದ್ಯವಾಗಿತ್ತು ಎಂದು 1 ಗಂಟೆ 53 ನಿಮಿಷಗಳ ಕಾಲ ಆಡಿ ಗೆದ್ದ ನಂತರ ಒಸಾಕಾ ಪ್ರತಿಕ್ರಿಯೆ ನೀಡಿದ್ದಾರೆ.
ಎರಡು ಬಾರಿಯ ಗ್ರಾಂಡ್ ಸ್ಲಾಂ ವಿಜೇತೆ ಅಜರೆಂಕಾ 2013ರಲ್ಲಿ ಯುಎಸ್ ಓಪನ್ ಟೆನಿಸ್ ನ್ನು ಸೆರೆನಾ ವಿಲಿಯಮ್ಸ್ ಜೊತೆ ಆಡಿದ ನಂತರ ಅತಿದೊಡ್ಡ ಅಂತಿಮ ಪಂದ್ಯದಲ್ಲಿ ಈ ಬಾರಿ ಆಡಿದ್ದಾರೆ.100%
ಪ್ರಶಸ್ತಿಯು 30 ದಶಲಕ್ಷ ಡಾಲರ್ ನಗದು ಬಹುಮಾನ ಮತ್ತು ಫಲಕವನ್ನು ಒಳಗೊಂಡಿದೆ. ಆರಂಭದಲ್ಲಿ ಅಜರೆಂಕಾ ಅವರು ಮೊದಲ ಸೆಟ್ ನಲ್ಲಿ ಮುಂಚೂಣಿಯಲ್ಲಿದ್ದರು.

 

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...