ಭಟ್ಕಳದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯ ಗೆದ್ದ ಪತ್ರಕರ್ತರು

Source: S.O. News Service | By I.G. Bhatkali | Published on 1st October 2018, 1:34 AM | Coastal News | Sports News | Don't Miss |

ಭಟ್ಕಳ: ಜೆಸಿಐ ಭಟ್ಕಳ ಇವರ ಆಶ್ರಯದಲ್ಲಿ ಇಲ್ಲಿನ ಪೊಲೀಸ್ ಮೈದಾನದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ಭಟ್ಕಳ ಪತ್ರಕರ್ತರ ತಂಡ ಗೆದ್ದುಕೊಂಡಿದೆ.

 ರವಿವಾರ ನಡೆದ ಅಂತಿಮ ರೋಚಕ ಪಂದ್ಯದಲ್ಲಿ ಪತ್ರಕರ್ತರ ತಂಡವು ಸೂಪರ್ ಓವರ್‍ನಲ್ಲಿ ಎದುರಾಳಿ ಪೊಲೀಸ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮೊದಲು ಬ್ಯಾಟಿಂಗ್ ನಡೆಸಿದ ಪೊಲೀಸ್ ತಂಡವು ನಿಗದಿತ 10 ಓವರ್‍ಗಳನ್ನು 45 ಓಟಗಳನ್ನು ಕಲೆ ಹಾಕಿತು. 46 ಓಟಗಳ ಗುರಿಯನ್ನು ಬೆನ್ನತ್ತಿದ್ದ ಪತ್ರಕರ್ತರ ತಂಡವು ಸುಲಭದ ಗೆಲುವಿನತ್ತ ಮುಂದಡಿ ಇಟ್ಟಿತ್ತಾದರೂ ಪೊಲೀಸ್ ತಂಡದ ಉತ್ತಮ ಕ್ಷೇತ್ರ ರಕ್ಷಣೆಯಿಂದಾಗಿ 7 ಆಟಗಾರರು ರನ್ ಔಟ್ ಆಗುವುದರೊಂದಿಗೆ ಪಂದ್ಯ ರೋಚಕ ಘಟ್ಟವನ್ನು ತಲುಪಿತು. ಅಂತಿಮ ಓವರ್‍ನ 6 ಎಸೆತಗಳಲ್ಲಿ ಪತ್ರಕರ್ತರ ತಂಡವು ಗೆಲುವಿಗಾಗಿ 5 ಓಟಗಳನ್ನು ಗಳಿಸಬೇಕಾಗಿತ್ತು. ಆದರೆ ಪತ್ರಕರ್ತರ ತಂಡವು ಕೇವಲ 4 ಓಟವನ್ನು ಗಳಿಸಲು ಶಕ್ತವಾದ ಕಾರಣ ಪಂದ್ಯ ಟೈ ಆಗುವುದರೊಂದಿಗೆ ಸೂಪರ್ ಓವರ್ ಮೊರೆ ಹೋಗಬೇಕಾಯಿತು.

ಸೂಪರ್ ಓವರ್‍ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪತ್ರಕರ್ತರ ತಂಡವು ಕೇವಲ 3 ಓಟಗಳನ್ನು ಕಲೆ ಹಾಕಿ 4 ಓಟಗಳ ಗುರಿಯನ್ನು ನೀಡಿತು. ಪತ್ರಕರ್ತರ ತಂಡದ ಕರಾರುವಾಕ್ ಬೌಲಿಂಗ್‍ನಿಂದ ರನ್ನಿಗಾಗಿ ತಿಣುಕಾಡಿದ ಪೊಲೀಸ್ ತಂಡದ ಆಟಗಾರರು 2 ವಿಕೆಟ್‍ಗಳನ್ನು ಕಳೆದುಕೊಂಡು ಗುರಿ ತಲುಪುವಲ್ಲಿ ವಿಫಲರಾದರು. ಜೆಸಿಐ ಅಧ್ಯಕ್ಷ ಅಬ್ದುಲ್ ಜಬ್ಬಾರ್, ರಮೇಶ್ ಖಾರ್ವಿ, ನಾಗರಾಜ ಶೇಟ್, ಭಟ್ಕಳ ಶಹರ ಠಾಣಾ ಎಸೈ ಕುಸುಮಾಧರ ಮೊದಲಾದವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...