ಬಾಲಕನ ಹತ್ಯೆ: ಪ್ರೇಯಸಿ ತಾಯಿ ಸೇರಿ ಇಬ್ಬರು ಆರೋಪಿಗಳ ಬಂಧನ

Source: S.O. News Service | By MV Bhatkal | Published on 4th March 2021, 7:47 PM | State News | Don't Miss |

ಕಲಬುರಗಿ:ಜೇವರ್ಗಿ ತಾಲ್ಲೂಕಿನ ನರಿಬೋಳ್ ಗ್ರಾಮದಲ್ಲಿ 14 ವರ್ಷದ ಬಾಲಕನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿ, ಕೈಕಾಲುಗಳನ್ನು ಕಟ್ಟಿ ಭೀಮಾ ನದಿಯಲ್ಲಿ ಎಸೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಬಾಲಕನ ಪ್ರೇಯಸಿಯ ತಾಯಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಾರಾ ಬಿ., ಹಾಗೂ ಆಕೆಯ ಪ್ರಿಯಕರ ಮೆಹಬೂಬ್ ಎಂದು ಗುರುತಿಸಲಾಗಿದೆ. ನರಿಬೋಳ್ ಗ್ರಾಮದ 14ರ ಬಾಲಕ ಅದೇ ಗ್ರಾಮದ ತನಗಿಂತ ವಯಸ್ಸಿನಲ್ಲಿ ದೊಡ್ಡವಳಾದ ಆರೋಪಿ ತಾರಾ ಬಿ., ಪುತ್ರಿಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಆಕೆಗೆ ಹೊಸ ಮೊಬೈಲ್ ಸಹ ಕೊಡಿಸಿದ್ದನಂತೆ. ಆದಾಗ್ಯೂ, ಯುವತಿಯ ತಾಯಿಗೆ ಇದು ಇಷ್ಟವಿರಲಿಲ್ಲ. ಹೀಗಾಗಿ ತನ್ನ ಪರಿಚಯಸ್ಥ ಮೆಹಬೂಬ್ ಎಂಬಾತನಿಗೆ ಹೆದರಿಸಲು ಹೇಳಿದ್ದಳು. ಆತ ಒಂದೆರಡು ಬಾರಿ ಆತನಿಗೆ ಹೆದರಿಸಿದ್ದರೂ ಬಾಲಕ ಮತ್ತು ಯುವತಿ ನಡುವಿನ ಪ್ರೀತಿ ಮುಂದುವರೆದಿತ್ತು.
ಇದರಿಂದ ಕುಪಿತಗೊಂಡ ಮೆಹಬೂಬ್ ಮತ್ತು ಯುವತಿ ತಾಯಿ ತಾರಾ ಬಿ., ಅವರು ಸ್ನೇಹಿತರ ಜೊತೆಗೂಡಿ ಬಾಲಕನಿಗೆ ಬೋಟ್‍ನಲ್ಲಿ ಚಾಮನೂರು ಸೇತುವೆ ಬಳಿ ಕರೆದುಕೊಂಡು ಹೋಗಿ ಕಂಠಪೂರ್ತಿ ಕುಡಿಸಿದ್ದಾರೆ. ನಂತರ ಬಾಲಕನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಆ ಬಳಿಕ ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನರಿಬೋಳ್- ಚಾಮನೂರು ಭೀಮಾ ನದಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಕೆಳಗೆ ಶವ ಎಸೆದು ಪರಾರಿಯಾಗಿದ್ದರು. ಈ ಕುರಿತು ಕಳೆದ ಫೆಬ್ರವರಿ 25ರಂದು ಬಾಲಕನ ಶವವು ಭೀಮಾ ನದಿ ದಡದಲ್ಲಿ ಪತ್ತೆಯಾಗಿತ್ತು.
ಪ್ರಕರಣದ ಬೆನ್ನಟ್ಟಿದ್ದ ಪೋಲಿಸರು, ಬಾಲಕನ ಮೊಬೈಲ್ ಕರೆಗಳ ಸಂಗ್ರಹವನ್ನು ತೆಗೆದಾಗ ಬಾಲಕನ ಪ್ರೀತಿಯ ವಿಷಯ ತಿಳಿದಿದೆ. ಈ ಕುರಿತು ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿದ್ದು, ತಾರಾ ಬಿ., ಹಾಗೂ ಮೆಹಬೂಬ್ ಅವರಿಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕೊಲೆಯಾದ ಬಾಲಕ ಏಳನೇ ತರಗತಿಯವರೆಗೆ ಓದಿ ನಂತರ ಊರಲ್ಲೇ ಓಡಾಡಿಕೊಂಡಿದ್ದ ಎನ್ನಲಾಗಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...