ಇನ್ನು ನೆನಪು ಮಾತ್ರ: ನಟ ಪುನೀತ್ ರಾಜ್ ಕುಮಾರ್ ಪಂಚಭೂತಗಳಲ್ಲಿ ಲೀನ

Source: S.O. News Service | By MV Bhatkal | Published on 31st October 2021, 12:05 PM | State News | Don't Miss |


ಬೆಂಗಳೂರು: ಬದುಕಿ ಬೆಳಗಬೇಕಿದ್ದ ವಯಸ್ಸಿನಲ್ಲಿ ಹಠಾತ್ ನಿರ್ಗಮನ ಘೋಷಿಸಿ ಕನ್ನಡ ಕುಲಕೋಟಿ ಜನರನ್ನು ದುಃಖದ ಕಡಲಿನಲ್ಲಿ ಮುಳುಗಿಸಿದ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಅಭಿಮಾನಿಗಳು ಪುನೀತ್'ಗೆ ಕಣ್ಣೀರ ವಿದಾಯ ಹೇಳಿದರು.

 


ಮೂರು ವರ್ಷದ ಹಿಂದೆಯಷ್ಟೇ ಗೋವಿಂದ ನಾಮ ಸ್ಮರಣೆಯೊಂದಿಗೆ ದಾಸಯ್ಯನ ಪದ್ಧತಿಯಂತೆ ಪುನೀತ್ ರಾಜ್ ಕುಮಾರ್ ಅವರು ತಮ್ಮ ತಾಯಿಯ ಅಂತ್ಯ ಸಂಸ್ಕಾರ ನಡೆಸಿದ್ದರು. ಹಠಾತ್ ಹೃದಯ ಸ್ತಂಭನದಿಂದ ಅಕಾಲಿಕ ನಿಧನ ಹೊಂದಿರುವ ಪುನೀತ್ ಅವರು ತಂದೆ, ತಾಯಿ ಪಕ್ಕದಲ್ಲೇ ಇದೀಗ ಚಿರಸ್ಥಾಯಿಯಾಗಿದ್ದಾರೆ.


ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್​ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆ ಶಿವ​ಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಮುಂಭಾಗ ಜಮಾಯಿಸಿದ್ದರು.

ಇದಕ್ಕೂ ಮುನ್ನ ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಹಣೆಗೆ ಮುತ್ತಿಟ್ಟು ಕಂಬನಿ ಮಿಡಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...