ಎಸ್‍ಡಿಪಿಐ ಕಾರ್ಯಕರ್ತನ ಹತ್ಯೆ

Source: sonews | By Staff Correspondent | Published on 9th September 2020, 12:34 AM | National News | Don't Miss |

ಕಣ್ಣೂರು: ಕಣ್ಣೂರು ಜಿಲ್ಲೆಯ ಕಣ್ಣವತ್ತ್ ಎಂಬಲ್ಲಿ ಎಸ್‍ಡಿಪಿಐ ಕಾರ್ಯಕರ್ತನೋರ್ವನನ್ನು ಹತ್ಯೆ ಮಾಡಲಾಗಿದೆ. ಕಣ್ಣವತ್ತ್ ನಿವಾಸಿ ಮುಹಮ್ಮದ್ ಸಲಾಹುದ್ದೀನ್ ಕೊಲೆಗೀಡಾದ ಯುವಕ. ತನ್ನ ಕುಟುoಬದೊಂದಿಗೆ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ನಲ್ಲಿ ತಲುಪಿದ ತಂಡವೊಂದು ಆಕ್ರಮಣ ನಡೆಸಿದೆ.

ಮಂಗಳವಾರ ಸಂಜೆ  ಚಿಟ್ಟಾರಿಕ್ಕಡವು ಸಮೀಪದ ಕೊಚ್ಚೇರಿ ಎಂಬಲ್ಲಿ ಘಟನೆ ನಡೆದಿದೆ. ತನ್ನಿಬ್ಬರು ಸಹೋದರಿಯರೊಂದಿಗೆ ಕೂತ್ತು ಪರಂಬದಿಂದ ಕನ್ನವತ್ತಿನ ಮನೆಗೆ ಬರುತ್ತಿದ್ದ ವೇಳೆ ಕಾರಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆಸಿದ್ದು ಈ ವೇಳೆ ಕಾರಿನಿಂದ ಇಳಿದ ಸಲಾಹುದ್ದೀನ್ ನನ್ನು ಬೈಕ್ ನಲ್ಲಿದ್ದ ಇಬ್ಬರು ತಲವಾರಿನಿಂದ ಯದ್ವಾತದ್ವಾ ಇರಿದಿದ್ದಾರೆ. ಆ ಬಳಿಕ ತಂಡ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಬೊಬ್ಬೆ ಕೇಳಿ ಅಲ್ಲಿಗೆ ತಲುಪಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುತ್ತಿಗೆಗೆ ಗಂಭೀರ ಗಾಯಗೊಂಡ ಸಲಾಹುದ್ದೀನ್ ರನ್ನು ತಲಶೇರಿ ಜನರಲ್ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...