ಕರ್ನಾಟಕ ಬಂದ್ : ನಾಳೆ ಏನಿಲ್ಲ? ಏನಿರುತ್ತೆ ??
ಬೆಂಗಳೂರು : ಸೆಪ್ಟೆಂಬರ್ 28ರಂದು ರೈತ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರಿಂದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವಸ್ಥವಾಗುವ ಸಾಧ್ಯತೆಯಿದೆ. ರೈತ ಸಂಘಟನೆಗಳು, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ರೈತ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆವರೆಗೂ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಕರ್ನಾಟಕ ಬಂದ್ ಆದರೆ ಏನಿರುತ್ತೆ?
ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ಇರಲಿದೆ. ಆಸ್ಪತ್ರೆ, ಮೆಡಿಕಲ್ ಸೇವೆಗಳಿಗೆ ಯಾವುದೇ ತೊಂದರೆಯಾಗಲ್ಲ. ಪೆಟ್ರೋಲ್ ಬಂಕ್ ಓಪನ್ ಇರಲಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ. . ಹೋಟೆಲ್ ಮಾಲೀಕರು ಸಹ ನೈತಿಕ ಬೆಂಬಲ ನೀಡಿದ್ದು, ಶುಕ್ರವಾರ ಹೋಟೆಲ್ ಗಳು ಇರಲಿದೆ.
ಬಂದ್ ಆದರೆ ಇವ್ಯಾವುದು ಇರಲ್ಲ
ಬಹುತೇಕ ಜಿಲ್ಲೆಗಳಲ್ಲಿ ನಾಳೆ ಆಟೋ-ಟ್ಯಾಕ್ಸಿಗಳು ಸಹ ಇರೋದು ಅನುಮಾನ. ಖಾಸಗಿ ಬಸ್ ಸೇವೆ ನಾಳೆ ಬಂದ್ ಆಗುವ ಸಾಧ್ಯತೆ ಹೆಚ್ಚು.