ವಿದ್ಯುತ್ ದರ ಹೆಚ್ಚಳ ಖಂಡಿಸಿ, ಜೂ.22ಕ್ಕೆ ಕರ್ನಾಟಕ ಬಂದ್; ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕರೆ
ಬೆಂಗಳೂರು: ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಜೂ.22ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ತಿಳಿಸಿದೆ. ಎಂಟು ದಿನಗಳಿಂದ ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ಆಗುತ್ತಿರುವ ತೊಂದರೆಗಳನ್ನು ಸರಕಾರಕ್ಕೆ ಮನವರಿಕೆಯನ್ನು ಮಾಡಿಕೊಡಲಾಗುತ್ತಿದೆ. ಆದರೆ, ಸರಕಾರದ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಹಾಗಾಗಿ ಜೂ.22ರಂದು ಬಂದ್ಗೆ ಕರೆ ನೀಡಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯಾದ್ಯಂತ ಅಂದು ಕೈಗಾರಿಕೆಗಳನ್ನು ತೆರೆಯುವುದಿಲ್ಲ. ಇದಕ್ಕೆ ಎಲ್ಲ ಜಿಲ್ಲೆಗಳ ಚೇಂಬರ್ಗಳ ಜೊತೆ ಮಾತುಕತೆಯನ್ನು ನಡೆಸಲಾಗಿದೆ. ಬಂದ್ ಆಚರಣೆಯ ಮೂಲಕ ಸರಕಾರದ ಗಮನವನ್ನು ಸೆಳೆದು, ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಲಾಗುವುದು ಎಂದು ಸಂಘಟನೆಯ ಕಾರ್ಯದರ್ಶಿ ಪ್ರವೀಣ್ ಎಸ್. ಅಗಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.