ಮೇಕೆದಾಟು ಜಲಾಶಯ ನಿರ್ಮಾಣ ಸುಪ್ರೀಂಕೋರ್ಟ್ನಲ್ಲಿ ಇಂದು ವಿಚಾರಣೆ
ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ದಿಲ್ಲಿಯ ರಾಷ್ಟ್ರೀಯ ಹಸಿರು ಮಂಡಳಿಯ ಪ್ರಧಾನ ನ್ಯಾಯಪೀಠ ಪ್ರಶ್ನಿಸಿ, ತೆರವುಗೊಳಿಸಿದ್ದನ್ನು ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಜ.11ರಂದು ವಿಚಾರಣೆಗೆ ಕೈಗೆತ್ತಿಕೊಳಲ್ಲಿದೆ.
ಈ ಮೊದಲು ಜ.3ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಜ.27ರಂದು ನಡೆಸುವುದಾಗಿ ಸರ್ವೋಚ್ಚ ನಯಾಯಾಲಯ ಹೇಳಿತ್ತು.
ಕೃಷ್ಣಾ ಜಲವಿವಾದ: ಕೃಷ್ಣಾ ಜಲ ವಿವಾದದ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಭೋಪಣ್ಣ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.