ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಚಿವ ಝಮೀರ್ ಅಹ್ಮದ್

Source: Vb | By I.G. Bhatkali | Published on 10th June 2023, 5:24 PM | State News |

ಬೆಂಗಳೂರು: ರಾಜ್ಯ ಹಜ್ ಸಮಿತಿ ವತಿಯಿಂದ ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಯಾತ್ರಿಗಳಿಗೆ ಶುಕ್ರವಾರ ನಮಾಝ್ ನಂತರ ಹಜ್ ಭವನದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಸ್ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಬೀಳ್ಕೊಟ್ಟರು.

ಪ್ರತೀ ವರ್ಷದಂತೆ ಈ ಬಾರಿಯೂ ಹಜ್ ಭವನದಿಂದ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಜ್ ಯಾತ್ರಿಗಳನ್ನು ಕರೆದು ಕೊಂಡು ಹೋಗಲು ಉಚಿತ ಬಸ್‌ ಸೌಲಭ್ಯ ಹಾಗೂ ಯಾತ್ರಿಗಳನ್ನು ಬೀಳ್ಕೊಡಲು ಆಗಮಿಸುವಂತಹ ಅವರ ಸಂಬಂಧಿಕರಿಗೆ ವೈಯಕ್ತಿಕವಾಗಿ ಊಟದ ವ್ಯವಸ್ಥೆಯನ್ನು (ಪ್ರತಿ ನಿತ್ಯ ಸುಮಾರು 35 ಸಾವಿರ ಮಂದಿಗೆ) ಮಾಡುತ್ತಿರುವ ಝಮೀರ್ ಅಹ್ಮದ್ ಅವರ ಸೇವೆಗೆ ಯಾತ್ರಿಗಳು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯನಗರ ಸಾಮ್ರಾಜ್ಯದ ಪರಂಪರೆಯ ಇತಿಹಾಸ ಹೊಂದಿರುವ ವಿಜಯ ನಗರ ಜಿಲ್ಲೆಯ ಉಸ್ತುವಾರಿ ನನಗೆ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಂದನೆಗಳು. ನೂತನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಮಸ್ತ ಜಿಲ್ಲೆಯ ಜನತೆ, ಜನ ಪ್ರತಿನಿಧಿ, ಸಂಘ ಸಂಸ್ಥೆಗಳನ್ನು ವಿಶಾಸಕ್ಕೆ ತೆಗೆದುಕೊಂಡು ಸಮನ್ವಯ ಸಹಕಾರದೊಂದಿಗೆ ಜಿಲ್ಲೆಗೆ ಹೊಸ ಸ್ಪರ್ಶ ನೀಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
ಝಮೀರ್ ಅಹ್ಮದ್ ಖಾನ್ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್, ಮೌಲಾನ ಮೈನುಲ್ ಆಬಿದೀನ್, ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ರೌಫುದ್ದೀನ್ ಕಚೇರಿವಾಲೆ, ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್ ಖಾನ್ ಸರ್ದಾರ್, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ, ಹಜ್ರತ್ ಹಮೀದ್ ಶಾ ಹಾಗೂ ಹಜ್ರತ್ ಮುಹೀಬ್ ಶಾ ದರ್ಗಾ ಸಮಿತಿಯ ಆಡಳಿತಾಧಿಕಾರಿ ಜಿ.ಎ.ಬಾವ, ಇನ್ನಿತರರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...