ಐಎಎಸ್‌ ಅಧಿಕಾರಿ ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ದೂರು

Source: Vb | By I.G. Bhatkali | Published on 21st February 2023, 9:05 AM | State News | Don't Miss |

ಬೆಂಗಳೂರು:ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಾನು ಮಾಡಿ ರುವ ಕೆಲಸಕ್ಕೆ ಶಾಸಕನ ಹತ್ತಿರ ಸಂಧಾನಕ್ಕೆ ಹೋಗಿರುವುದು ಗೊತ್ತಾಗಿದ್ದು, ಇದನ್ನು ಬಹಿ ರಂಗಪಡಿಸಲಿ, ಜತೆಗೆ, ರಾಜ್ಯ ಸರಕಾರ ಈ ಸಂಬಂಧ ತನಿಖೆ ನಡೆಸಲಿ' ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮುದ್ಗಿಲ್ ದೂರು ಸಲ್ಲಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇ ಶಿಸಿ ಮಾತನಾಡಿದ ಅವರು, 'ರೋಹಿಣಿ ಸಿಂಧೂರಿ ಅವರು ಶಾಸಕ ಸಾ.ರಾ.ಮಹೇಶ್ ಅವರೊಂದಿಗೆ ರಾಜಿ ಸಂಧಾನ ಮಾಡಿ ಕೊಂಡಿರುವುದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಇವರು ಏಕೆ ಸಂಧಾನಕ್ಕೆ ಹೋದರು? ಏಕೆ ಹೋಗಬೇ ಕಿತ್ತು?' ಎಂದು ಪ್ರಶ್ನೆ ಮಾಡಿದರು. ಅಲ್ಲದೆ, ಯಾವ ಸರಕಾರಿ ನಿಯಮದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಗಳ ಜತೆ ರಾಜಕಾರಣಿಗಳ ಸಂಧಾನಕ್ಕೆ ಅವಕಾಶವಿದೆ? ಪ್ರಕರಣಗಳು ಸರಕಾರದ ಮಟ್ಟದಲ್ಲಿ ಇದ್ದಾಗ ಯಾಕೆ ಸಂಧಾನಕ್ಕೆ ಹೋಗಿದ್ದರು. ಏನಾದರು ತಪ್ಪು ಮಾಡಿದ್ದೀರಾ ಎಂದ ಅವರು, ಆ ರಾಜಕಾರಣಿಗೂ ರೋಹಿಣಿ ಸಿಂಧೂರಿ ವಿರುದ್ಧದ ಯಾವುದೋ ದಾಖಲೆ, ಪೋಟೊ ಸಿಕ್ಕಿರಬೇಕು.

ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರೋಹಿಣಿ ಸಿಂಧೂರಿ, (ಐಎಎಸ್ ಅಧಿಕಾರಿ):
ರೂಪಾ ಅವರು ಜವಾಬ್ದಾರಿ ಯುತ ಸ್ಥಾನದಲ್ಲಿದ್ದಾರೆ. ಆದರೆ, ನನ್ನ ಮೇಲೆ ಹಗೆ ತೀರಿಸಿಕೊಳ್ಳಲು ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ಸರ್ವಿಸ್ ಕಂಡಕ್ಟ್ ರೂಲ್ಸ್ (ಸೇವಾ ನಡತೆ ನಿಯಮ) ಉಲ್ಲಂಘಿಸಿರುವ ರೂಪಾ ವಿರುದ್ಧ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡುತ್ತೇನೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇನೆ. ಅಲ್ಲದೆ, ವೈಯಕ್ತಿಕ ಹಗೆಯನ್ನಿಟ್ಟುಕೊಂಡು ನನ್ನ ವಿರುದ್ಧ ಸುಳ್ಳು ಹಾಗೂ ವೈಯಕ್ತಿಕ ನಿಂದನೆಯ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಿಂದ ತೆಗೆದ ಫೋಟೊಗಳನ್ನು ನನ್ನ ತೇಜೋವಧೆಗೆ ಬಳಸಿಕೊಳ್ಳುತ್ತಿದ್ದಾರೆ. ಈ ಫೋಟೊಗಳನ್ನು ನಾನು ಕೆಲವು ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎಂದು ಆರೋಪಿಸಿರುವ ರೂಪಾ, ಸದರಿ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಬೇಕು.

ಕಳಿಸಬಾರದಂತಹ ಫೋಟೊಗಳನ್ನು ಕಳಿಸುವ ಅಗತ್ಯವೇನಿದೆ?: ಡಿ.ರೂಪಾ ಮೂದ್ಗಿಲ್ (ಐಪಿಎಸ್ ಅಧಿಕಾರಿ):
ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿ ದಂತೆ ಹಲವರಿಗೆ ರೋಹಿಣ ಸಿಂಧೂರಿ ಕಳಿಸಬಾರದಂತಹ ಫೋಟೊಗಳನ್ನು ಕಳುಹಿಸಿದ್ದಾರೆ. ಅವುಗಳು ನನಗೆ ಸಿಕ್ಕಿವೆ. ಅವೆಲ್ಲವನ್ನು ಸರಕಾರಕ್ಕೆ ನೀಡಿದ್ದೇನೆ. ಒಂದಿಷ್ಟು ಮಾದರಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದೇನೆ. ಈ ಬಗ್ಗೆ ಸೂಕ್ತ ತನಿಖೆಯಾಗಲಿ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...