ಬೆಂಗಳೂರು: ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ನೀಡಿಲ್ಲ ಎಂದು ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಆರೋಪಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣ ಕುರಿತು ವೀಡಿಯೊ ಮೂಲಕ ಪ್ರತಿಕ್ರಿಯಿಸಿರುವ ಕಾರ್ತಿಕ್, ನಾನು ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ಜೊತೆ 15 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದೆ. ವರ್ಷದ ಹಿಂದೆ ನಾನು ಕೆಲಸ ಬಿಟ್ಟಿದ್ದೇನೆ. ನನ್ನ ಮೇಲೆ ಮಾಡಿದ ದೌರ್ಜನ್ಯ, ನಮ್ಮ ಜಮೀನು ಬರೆಸಿಕೊಂಡಿದ್ದು, ಹೆಂಡತಿ ಮೇಲೆ ಹಲ್ಲೆ ಮಾಡಿದ್ದ ವಿಚಾರವಾಗಿ ನಾನು ಅವರ ಮನೆಯಿಂದ ಹೊರಗೆ ಬಂದೆ. ಆನಂತರ, ನಾನು ಅವರ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದರು.
ಬಿಜೆಪಿ ಮುಖಂಡ ದೇವರಾಜೇ ಗೌಡ ಬಗ್ಗೆ ಗೊತ್ತಾಗಿ ಅವರ ಬಳಿ ಕಷ್ಟ ಹೇಳಿಕೊಂಡಿದ್ದೆ. ಆಗ, ಅವರು ನ್ಯಾಯ ಒದಗಿಸಿ ಕೊಡುವ ಭರವಸೆ ನೀಡಿದ್ದರು. ಆದರೆ, ಅವರು ಪ್ರಕರಣ ತೆಗೆದುಕೊಳ್ಳಲಿಲ್ಲ. ಹಾಗಾಗಿ ನಾನು ಬೇರೆ ವಕೀಲರೊಂದಿಗೆ ಸೇರಿ ಕಾನೂನು ಹೋರಾಟ ನಡೆಸುತ್ತಿದ್ದೆ. ಅವರು ಜನ ರಿಗೆ ಗೊತ್ತಾಗಬೇಕು ಎಂದು ಹೇಳಿ ಮಾಧ್ಯ ಮಗಳಿಗೆ ಹೇಳಿಕೆ ಕೊಡಿಸಿದ್ದರು ಎಂದು ಆರೋಪಿಸಿದರು.