ಬರಿದಾಯಿತು ತ.ನಾ ರಾಜಕೀಯ ’ನಿಧಿ’ ;ರಾಷ್ಟ್ರಪತಿ ಸೇರಿದಂತ ಹಲವು ಮುಖಂಡರ ಸಂತಾಪ

Source: sonews | By Staff Correspondent | Published on 7th August 2018, 10:52 PM | State News | National News | Special Report | Don't Miss |

ಹೊಸದಿಲ್ಲಿ: ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಸಿಎಂ ಎಂ.ಕರುಣಾನಿಧಿಯವರ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಹಲವು ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

 

“ಕಲೈಞರ್ ಕರುಣಾನಿಧಿ ನಿಧನದ ಸುದ್ದಿ ಕೇಳಿ ಬೇಸರಗೊಂಡಿದ್ದೇನೆ. ಅವರು ದೇಶದ ಹಿರಿಯ ನಾಯಕರಲ್ಲೊಬ್ಬರು. ನಾವು ಇಂದು ಚಿಂತಕ, ಬರಹಗಾರ, ತಳಮಟ್ಟದ ನಾಯಕರೊಬ್ಬರನ್ನು ಕಳೆದುಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಸಚಿವ ಸುರೇಶ್ ಪ್ರಭು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್. ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಉಮರ್ ಅಬ್ದುಲ್ಲಾ ಸೇರಿ ಹಲವು ರಾಜಕೀಯ ನಾಯಕರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

“ಇಂದು ನನ್ನ ಬದುಕಿನಲ್ಲಿ ಕರಾಳ ದಿನ. ಕಲೈಞರ್ ರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ನಟ, ರಾಜಕಾರಣಿ ರಜಿನಿಕಾಂತ್ ಟ್ವೀಟ್ ಮಾಡಿದ್ದಾರೆ.

ಆ.೮ರಂದು ಕರ್ನಾಟಕ ರಾಜ್ಯದ್ಯಂತ ಶೋಕಾಚರಣೆ

ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ಎಂ.ಕರುಣಾನಿಧಿ ಅವರ ನಿಧನಕ್ಕೆ ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಆ.8ರಂದು ಒಂದು ದಿನ ಕರ್ನಾಟಕದಲ್ಲಿ ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. 

ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ, ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರಕಾರದ ಉಪ ಕಾರ್ಯದರ್ಶಿ ವಿಜಯಮಹಾಂತೇಶ ದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕರುಣಾನಿಧಿ ರಾಜಕೀಯ ಯಾತ್ರೆಯ ಹಿನ್ನೋಟ

 

ಚೆನ್ನೈ: ‘ಕಲೈಞರ್’ ಎಂದೇ ಬೆಂಬಲಿಗರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಕರುಣಾನಿಧಿ ಅವರ ರಾಜಕೀಯ ಯಾತ್ರೆಯ ಒಂದು ಸಂಕ್ಷಿಪ್ತ ನೋಟ:

ಜನನ: 1924ರ ಜೂನ್ 3; ತಮಿಳುನಾಡಿನ ಅಂದಿನ ತಂಜಾವೂರು(ಇಂದು ತಿರುವರೂರ್) ಜಿಲ್ಲೆಯ ತಿರುಕ್ಕವಲೈ. ಮೊದಲ ಹೆಸರು ದಕ್ಷಿಣಾಮೂರ್ತಿ.

1938: ಜಸ್ಟಿಸ್ ಪಾರ್ಟಿಗೆ ಸೇರುವ ಮೂಲಕ ರಾಜಕೀಯ ಪ್ರವೇಶ. ಹಿಂದಿ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡಿದ್ದರು.

1942: ಕೈಬರಹದ, ಎಂಟು ಪುಟಗಳನ್ನು ಒಳಗೊಂಡಿದ್ದ ‘ಮನಾವರ್ ನೇಸನ್’ ಎಂಬ ಪತ್ರಿಕೆಯನ್ನು ಆರಂಭಿಸಿದರು. ಬಳಿಕ ಇದು ಡಿಎಂಕೆಯ ಮುಖವಾಣಿ ‘ಮುರಸೋಳಿ’ ಎಂಬ ಹೆಸರು ಪಡೆಯಿತು. ಬಳಿಕ ತಮಿಳುನಾಡು ತಮಿಳ್ ಮನ್ನವರ್ ಮಂದ್ರಮ್ ಎಂಬ ಸಂಘಟನೆ ಆರಂಭಿಸಿದ್ದು ಇದು ಬಳಿಕ ಡಿಎಂಕೆಯ ವಿದ್ಯಾರ್ಥಿ ಸಂಘಟನೆಯಾಗಿ ಬೆಳೆಯಿತು.

1944: ಜ್ಯುಪಿಟರ್ ಪಿಕ್ಚರ್ಸ್ ಸಂಸ್ಥೆಗೆ ಚಿತ್ರಕಥೆ ಲೇಖಕನಾಗಿ ಸೇರಿದರು.

1947: ಇವರು ಚಿತ್ರಕಥೆ ಬರೆದ ಪ್ರಥಮ ಸಿನೆಮ ‘ರಾಜಕುಮಾರಿ’ ಬಿಡುಗಡೆ.

1949: ದ್ರಾವಿಡರ್ ಕಳಗಂನಿಂದ ದೂರವಾಗಿದ್ದ ಅಣ್ಣಾದುರೈ ಜೊತೆ ಸೇರಿ ಡಿಎಂಕೆ ಸ್ಥಾಪನೆ.

1952: ಕರುಣಾನಿಧಿ ಚಿತ್ರಕಥೆ ಬರೆದಿದ್ದ ಯಶಸ್ವೀ ಸೂಪರ್‌ಹಿಟ್ ಸಿನೆಮ ‘ಪರಾಶಕ್ತಿ’ ಬಿಡುಗಡೆ. ದ್ರಾವಿಡರ ಚಳವಳಿಯ ತಿರುಳನ್ನು ಹೊಂದಿದ್ದ ಪ್ರಥಮ ಚಿತ್ರವಿದು.

1953: ಕಲ್ಲಕುಡಿ ನಗರವನ್ನು ದಾಲ್ಮಿಯಾಪುರಂ(ಸಿಮೆಂಟ್ ಸಂಸ್ಥೆಯೊಂದರ ಹೆಸರು) ಎಂದು ಮರುನಾಮಕರಣಗೊಳಿಸುವ ನಿರ್ಧಾರವನ್ನು ವಿರೋಧಿಸಿ ರೈಲು ಹಳಿಗಳ ಮೇಲೆ ಮಲಗಿ ಪ್ರತಿಭಟನೆ. 3 ತಿಂಗಳ ಸೆರೆವಾಸದ ಶಿಕ್ಷೆ.

1957: ಕುಳಿತಲೈ ವಿಧಾನಸಭಾ ಕ್ಷೇತ್ರದಿಂದ ಮೊತ್ತ ಮೊದಲ ಬಾರಿಗೆ ಚುನಾಯಿತರಾದರು.

1961: ಡಿಎಂಕೆಯ ಖಜಾಂಚಿಯಾಗಿ ನೇಮಕ.

1962: ವಿಧಾನಸಭೆಯಲ್ಲಿ ವಿರೋಧಪಕ್ಷಗಳ ಉಪನಾಯಕನಾಗಿ ನೇಮಕ.

1967: ಡಿಎಂಕೆ ಮೊತ್ತಮೊದಲ ಬಾರಿಗೆ ಅಧಿಕಾರಕ್ಕೆ. ಅಣ್ಣಾದುರೈ ಸಂಪುಟದಲ್ಲಿ ಕರುಣಾನಿಧಿ ಲೋಕೋಪಯೋಗಿ ಇಲಾಖೆಯ ಸಚಿವರಾಗಿ ನೇಮಕ.

1969: ಅಣ್ಣಾದುರೈ ನಿಧನದ ಬಳಿಕ ಮೊತ್ತಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾದರು.

1972: ಕರುಣಾನಿಧಿಯಿಂದ ದೂರವಾದ ಎಂಜಿಆರ್ ಎಐಎಡಿಎಂಕೆ ಸ್ಥಾಪಿಸಿದರು.

1976: ಭ್ರಷ್ಟಾಚಾರದ ಆರೋಪದಲ್ಲಿ ಕರುಣಾನಿಧಿ ಸರಕಾರವನ್ನು ಇಂದಿರಾಗಾಂಧಿ ವಜಾಗೊಳಿಸಿದರು.

1977: ಎಐಎಡಿಎಂಕೆ ಅಧಿಕಾರಕ್ಕೆ ಬಂದಿತು. ಮುಂದಿನ 13 ವರ್ಷ ಕರುಣಾನಿಧಿ ವಿಪಕ್ಷದ ಸ್ಥಾನದಲ್ಲಿ ಕುಳಿತರು.

1989: ಎಂಜಿಆರ್ ನಿಧನದ ಬಳಿಕ ಡಿಎಂಕೆ ಹಾಗೂ ಕರುಣಾನಿಧಿ ಮರಳಿ ಅಧಿಕಾರಕ್ಕೆ.

1991, ಜನವರಿ: ಎಲ್‌ಟಿಟಿಇಗೆ ನಿಕಟವಾಗಿದೆ ಎಂಬ ಕಾರಣ ನೀಡಿ ಕೇಂದ್ರ ಸರಕಾರ ಡಿಎಂಕೆ ಸರಕಾರವನ್ನು ವಜಾಗೊಳಿಸಿತು.

1991, ಮೇ: ರಾಜೀವ್‌ಗಾಂಧಿಯವರ ಹತ್ಯೆ; ಎಐಎಡಿಎಂಕೆ-ಕಾಂಗ್ರೆಸ್ ಮಿತ್ರಕೂಟ ಚುನಾವಣೆಯಲ್ಲಿ ಸಂಪೂರ್ಣ ಪ್ರಾಬಲ್ಯ ಮೆರೆಯಿತು.

1996: ರಜನೀಕಾಂತ್ ಡಿಎಂಕೆ-ಟಿಎಂಸಿ ಮೈತ್ರಿಕೂಟವನ್ನು ಬೆಂಬಲಿಸಿದ ಬಳಿಕ ಜಯಲಲಿತಾರನ್ನು ಅಧಿಕಾರದಿಂದ ಕೆಳಗಿಳಿಸಿ ಮರಳಿ ಅಧಿಕಾರಕ್ಕೆ.

2001: ಭ್ರಷ್ಟಾಚಾರ ಆರೋಪದಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸರಕಾರ ಕರುಣಾನಿಧಿ, ಸ್ಟಾಲಿನ್ ಹಾಗೂ ಮಾರನ್‌ರನ್ನು ಬಂಧಿಸಿತು.

2004: ಲೋಕಸಭಾ ಚುನಾವಣೆಯಲ್ಲಿ 40 ಸ್ಥಾನ ಪಡೆದಿದ್ದ ಡಿಎಂಕೆ ನೇತೃತ್ವದ ಮಿತ್ರಕೂಟ ಕೇಂದ್ರ ಸರಕಾರದಲ್ಲಿ 7 ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಯಿತು.

2006: ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ.

2009: ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದರು. ಬಳಿಕ ಗಾಲಿಕುರ್ಚಿಯ ಸಹಾಯ ಪಡೆಯಬೇಕಾಯಿತು.

2010: 2ಜಿ ಸ್ಪೆಕ್ಟ್ರಮ್ ಹಗರಣದಲ್ಲಿ ಕೇಂದ್ರದ ಟೆಲಿಕಾಂ ಸಚಿವ ಎ.ರಾಜ ಹೆಸರು ಕೇಳಿಬಂದಿತು.

2011: 2ಜಿ ಹಗರಣದಲ್ಲಿ ಕರುಣಾನಿಧಿ ಪುತ್ರಿ ಕನಿಮೋಳಿ ಬಂಧನ. ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆಗೆ ಸೋಲು.

2013, ಜನವರಿ: ತನ್ನ ಉತ್ತರಾಧಿಕಾರಿಯಾಗಿ ಸ್ಟಾಲಿನ್ ಹೆಸರು ಘೋಷಣೆ .

2013, ಮಾರ್ಚ್: ಈಳಂ ತಮಿಳು ವಿವಾದ ; ಯುಪಿಎಯಿಂದ ಹಿಂದೆ ಸರಿದ ಡಿಎಂಕೆ, ಕೇಂದ್ರ ಸಂಪುಟಕ್ಕೆ ಡಿಎಂಕೆ ಸಚಿವರ ರಾಜೀನಾಮೆ.

2014: ಪಕ್ಷದಿಂದ ಹಿರಿಯ ಪುತ್ರ ಅಳಗಿರಿ ಉಚ್ಛಾಟನೆ; ವಯಸ್ಸನ್ನು ಮರೆತು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರೂ ಡಿಎಂಕೆಗೆ ಸೋಲು. ಆದರೆ ತಿರುವರೂರ್ ಸ್ಥಾನ ಉಳಿಸಿಕೊಂಡ ಕರುಣಾನಿಧಿ.

2016: ಆಸ್ಪತ್ರೆಗೆ ದಾಖಲು; ಕೆಲ ದಿನದ ಬಳಿಕ ಬಿಡುಗಡೆ.

2017, ಜನವರಿ: ಬಿಗಡಾಯಿಸಿದ ಆರೋಗ್ಯಸ್ಥಿತಿ. ಡಿಎಂಕೆ ಕಾರ್ಯಾಧ್ಯಕ್ಷರಾಗಿ ಸ್ಟಾಲಿನ್ ಆಯ್ಕೆ. 2017, ಮೇ: ವಿಧಾನಸಭಾ ಶಾಸಕನಾಗಿ 60 ವರ್ಷ ಪೂರ್ಣ.

2017, ಅಕ್ಟೋಬರ್: ಪಕ್ಷದ ಮುಖವಾಣಿ ‘ಮುರಸೋಳಿ’ಯ 75ನೇ ವರ್ಷಾಚರಣೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಪತ್ರಿಕೆಯ ಕಚೇರಿಗೆ ಆಗಮನ. ಒಂದು ವರ್ಷದ ಬಳಿಕ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡರು.

2018 ಜೂನ್: 94ನೇ ಜನ್ಮದಿನಾಚರಣೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...