ಕಾರವಾರ ಸೆ.22 : ಆಧಾರ್ ನೋಂದಣ ಅದಾಲತ್ ನಗರಸಭೆ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣ ಅದಾಲತ್ ನಡೆಯುತ್ತಿದ್ದು ಈ ಹಿಂದೆ ಆಧಾರ್ ವಿಷಯದಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣ ಮಾಡಿಸದಿದ್ದವರು ಈ ಆದಾಲತ್ನಲ್ಲಿ ನೋಂದಣ ಮಾಡಿಸಲು ಸುವರ್ಣಾವಕಾಶ ಎಂದರು.
ಈ ಹಿಂದೆ ಆಧಾರ್ ನೋಂದಣ ಮಾಡಿಸಿ ತಾಂತ್ರಿಕ ಕಾರಣಗಳಿಂದ ಆಧಾರ್ ಸಿಗದಿದ್ದವರೂ ಮತ್ತೊಮ್ಮೆ ಆಧಾರ್ ನೋಂದಣ ಮಾಡಿಸಬೇಕು ಅಲ್ಲದೆ, ಮೊಬೈಲ್ ಲಿಂಕ್, ವಿಳಾಸ ಬದಲಾವಣೆ, ಹೆಸರಿನಲ್ಲಿನ ದೋಷಗಳ ತಿದ್ದುಪಡಿ, ವಯಸ್ಸು ಮತ್ತು ಹುಟ್ಟಿದ ದಿನಾಂಕದ ತಿದ್ದುಪಡಿಗಳ ಅವಶ್ಯವಿದ್ದಲ್ಲೂ ಅದಾಲತ್ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕಿದೆ ಎಂದರು.
ಜಿಲ್ಲಾದ್ಯಂತ ಪ್ರತಿ ತಾಲೂಕಿನಲ್ಲೂ ಆಧಾರ್ ನೋಂದಣ ಅದಾಲತ್ ನಡೆಯಲಿದ್ದು ಪ್ರತಿ ತಾಲೂಕಿನಲ್ಲಿ 10 ದಿನಗಳ ಕಾಲ ನಾಲ್ಕು ಕಿಟ್ಗಳ ಮೂಲಕ ನಿರಂತರ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಎಲ್ಲರಿಗೂ ಆಧಾರ್ ಸೌಲಭ್ಯ ಒದಗಿಸುವುದು ಇದರ ಮುಖ್ಯ ಉದ್ದೇಶ ಎಂದರು.
ವಿಶೇಷವಾಗಿ ಕಾರವಾರ ನಗರ ವ್ಯಾಪ್ತಿಯಲ್ಲಿ ವಯೋವೃದ್ಧರು, ವಿಕಲಾಂಗತೆಯಿಂದ ಆಧಾರ್ ನೋಂದಣಿಗೆ ಆಗಮಿಸದೆ ಬಿಟ್ಟು ಹೋಗಿರುವವರು ಹಾಗೂ ಹಾಸಿಗೆ ಹಿಡಿದಿರುವವರಿಗಾಗಿ ಸಹಾಯವಾಣಿ ಸೌಲಭ್ಯವನ್ನು ಕಲ್ಪಿಸಲಾಗಿದ್ದು ಕರೆ ಬಂದಲ್ಲಿ ಅವರ ಮನೆಗೇ ತೆರಳಿ ಆಧಾರ್ ನೋಂದಣ ಮಾಡಿಸಲಾಗುವುದು. ಕಂಟ್ರೋಲ್ ರೂಂ ಸಹಾಯವಾಣ ಸಂಖ್ಯೆ 08382 229857 ಹಾಗೂ 1077 ನಂಬರಿಗೆ ಕರೆ ಮಾಡಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...