ಕಾರವಾರ: ಚುನಾವಣೆ ಅಧಿಸೂಚನೆ ಪ್ರಕಟಣೆ
ಕಾರವಾರ ಆಗಸ್ಟ 2 : ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಆಗಸ್ಟ 14 ನಾಮ ಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆ. 16 ರಂದು ನಾಮಪ್ರಗಳನ್ನು ಪರಿಶೀಲಿಸಲಾಗುವದು. ಆ. 19 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಆಗಸ್ಟ 23 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಆಗಸ್ಟ 23 ರಂದು ಮತ ಎಣ ಕೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿ0ಗ್ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ ಆಗಸ್ಟ 2 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗದಲ್ಲಿ ಬರುವ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿ0ಗ್ ತರಬೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 18ರಿಂದ 35ರ ವಯೋಮಿತಿಯೊಳಗಿದ್ದು ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕ್ಕಿಂತ ಕಡಿಮೆ ಇರುವ ಅಭ್ಯರ್ಥಿಗಳು ತಮ್ಮಕೈ ಬರಹದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗು ಶಾಲಾ ಟಿ.ಸಿ. ಯೊಂದಿಗೆ ಆಗಸ್ಟ 21 ರ ಒಳಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಸಿಂ ಮಂಜಿಲ್ , ಹೈ ಚರ್ಚ ಹತ್ತಿರ, ಕಾರವಾರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂ. 08382-223229 ಸಂಪರ್ಕಿಸಬಹುದು.