ಕಾರವಾರ:  ಡಿಪ್ಲೋಮಾ ಇಂಟರಾಕ್ಟೀವ ಕೌನ್ಸಲಿಂಗ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Source: varthabhavan | By Arshad Koppa | Published on 24th June 2017, 8:47 AM | Coastal News | State News | Guest Editorial |

ಕಾರವಾರ ಜೂ.ನ 23 : ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳಿಗೆ 2 ನೇ ವರ್ಷದ 3 ನೇ ಸೆಮಿಸ್ಟರ್ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಿಗೆ 2017-18 ನೇ ಸಾಲಿನ  ಆನ್ ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಪ್ರವೇಶಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ.


  ಅರ್ಜಿ ಸಲ್ಲಿಸಲು ಜೂನ 27 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ ತwww.dte.kar.nic.in , www.dte.kar.nic.in www.diplomaadmission.in   ನಿಂದ ಪಡೆಯಬಹುದು. ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ 2ಎ, 2ಬಿ, 3ಎ, 3ಬಿ ಕೆಟಗೇರಿಯ ಅಭ್ಯರ್ಥಿಗಳಿಗೆ 100 ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರ.ವರ್ಗ-1 ಅಭ್ಯರ್ಥಿಗಳಿಗೆ 50 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. _    
  ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಶಾಖೆಗಳಲ್ಲಿನ ಚಾಲ್ತಿ ಖಾತೆ ED-KEA-DCET-2017 Application fee Collection Account No. 36843662415’ ಗೆ ಪಾವತಿಸಿ ಬ್ಯಾಂಕ್ ಚಲನ( Counterfoil) ನ್ನು ಪಡೆದು ಸಮೀಪದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳ  ದಾಖಲೆ ಪರಿಶೀಲನೆ ಹಾಗೂ ಆನ್‍ಲೈನ್ ಅರ್ಜಿಗಳ ಭರ್ತಿ/ದಾಖಲೆಗಳ ಪರಿಶೀಲನಾ ಕೇಂದ್ರ  ನಲ್ಲಿ ಸಂಬಂಧಿಸಿದ ಎಲ್ಲಾ ಮೂಲ ಪ್ರಮಾಣಪತ್ರವನ್ನು ಮತ್ತು ಸ್ವಯಂ ದೃಢೀಕೃತ  ಝೇರಾಕ್ಸ್ ಪ್ರತಿಯೊಂದಿಗೆ ಸಲ್ಲಿಸುವುದು. 
 ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಪಾಲಿಟೆಕ್ನಿಕ್‍ಗಳು, ಕೋರ್ಸುಗಳು, ಮೀಸಲಾತಿ ವಿವರ ಮುಂತಾದ ಮಾಹಿತಿಯನ್ನು ವೆಬ್‍ಸೈಟ್‍ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ಕಾರವಾರ ಪಾಲಿಟೆಕ್ನೀಕ್ ಕಾಲೇಜಿನ ಪ್ರಾನ್ಸುಪಾಲರು ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...