ಭಟ್ಕಳ: ಕೋವಿಡ್-19 ಮೆಡಿಕಲ್ ನೂಡಲ್ ಅಧಿಕಾರಿಯಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಡಾ.ಶರದ್ ನಾಯಕ ರನ್ನು ಉತ್ತರಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯನ್ನಾಗಿ ನೇಮಿಸಿ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಇಂಬ ಕಲ್ಯಾಣಾಧಿಕಾರಿಯಾಗಿ ಕಳೆದ ಒಂಬತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ. ಅಶೋಕ ಕುಮಾರ್ ಮೇ.೩೧ಕ್ಕೆ ನಿವೃತ್ತರಾಗಲಿದ್ದು ಅವರ ಸ್ಥಾನಕ್ಕೆ ಡಾ. ಶರದ್ ನಾಯಕ ನೇಮಕಗೊಂಡಿದ್ದಾರೆ.