ಕಾರವಾರ: ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ

Source: S O News | By I.G. Bhatkali | Published on 4th January 2024, 10:41 AM | Coastal News |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ರಾಮನಗರ-ಅನಮೋಡ ನಡುವಿನ (ತಿನ್ನೇಘಾಟ) ಪ್ರದೇಶದಲ್ಲಿ ನೈರುತ್ಯ ರೇಲ್ವೆ ವತಿಯಿಂದ (TGT-CLR Railway  doubling Project) ರೇಲ್ವೆ ಹಳಿ ದ್ವಿಗುಣಗೊಳಿಸುವ  ಕಾಮಗಾರಿ ಕೈಗೊಳ್ಳುವುದು ಅವಶ್ಯವಾಗಿರುವುದರಿಂದ ಜನವರಿ 5 ರಿಂದ 25ರ ವರೆಗೆ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿ (NH-4A) ಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ, ಅನುಮೋಡನಿಂದ ರಾಮನಗರ (ದಾಂಡೇಲಿ) ಕಡೆಗೆ ಹೋಗುವ ಲಘು ವಾಹನಗಳಿಗೆ ಅನುಮೋಡ-ಕ್ಯಾಸರಲಾಕ್ ಕ್ರಾಸ್-ಕ್ಯಾಸರಲಾಕ್-ಕುಣಗಿನಿ ಚೆಕ್‍ಪೋಸ್ಟ್- ಚಾಂದೇವಾಡಿ-ಜಗಲಬೇಟ್ ಮಾರ್ಗವಾಗಿ ಏಕಮುಖ ಸಂಚಾರ, ರಾಮನಗರದಿಂದ ಅನುಮೋಡ ಹೊಗುವ ಲಘು ವಾಹನಗಳಿಗೆ  ರಾಮನಗರ-ತಿನ್ನೇಘಾಟ-ಮಾರ್ಸಂಗಳ್ ಕ್ರಾಸ್-ಹೆಮ್ಮಡಗಾ ರೊಡ್- ಅನುಮೋಡ್ ಮಾರ್ಗವಾಗಿ ಏಕಮುಖ ಸಂಚಾರ ಹಾಗೂ ಮಧ್ಯಮ ಮತ್ತು ಭಾರಿ ವಾಹನಗಳಿಗೆ ಆಳ್ನಾವರ-ಹಳಿಯಾಳ-ಯಲ್ಲಾಪುರ-ಕಾರವಾರ- ಗೋವಾ ಮಾರ್ಗದ ಮೂಲಕ ಸಂಚರಿಸುವಂತೆ ಆದೇಶಿಸಿದ್ದಾರೆ. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...