ಕಾರವಾರ : ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿಯಲ್ಲಿ ಈಗಾಗಲೇ ಮಾರ್ಚ 31 ರ ಒಳಗಾಗಿ ಸಾಲ ಪಡೆದ ಬೀದಿಬದಿ ವ್ಯಾಪಾರಿಗಳಿಗೆ ಎರಡನೇ ಅವಧಿಗೆ ಬ್ಯಾಂಕ್ನಿಂದ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಪಡೆಯಲು ಹಾಗೂ ಸಾಲ ಪಡೆಯದೇ ಇರುವ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕಾರವಾರ ನಗರಸಭೆ ಪೌರಾಯುಕ್ತ ಆರ್.ಪಿ. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಪಡೆದ ಬೀದಿಬದಿ ವ್ಯಾಪಾರಿಗಳು ಈ ಹಿಂದೆ ಪಡೆದ ಸಾಲವನ್ನು ಮರುಪಾವತಿ ಮಾಡುತ್ತಿದ್ದಲ್ಲಿ, ಅಂತವರು ಸಾಲವನ್ನು ಪಡೆಯಲು ಅರ್ಹರಿರುತ್ತಾರೆ. ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳು ತಮ್ಮ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರಕಾರ್ಡ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ಬುಕ್ನ ಪ್ರತಿ, ಪಡಿತರ ಚೀಟಿ ದಾಖಲೆಗಳೊಂದಿಗೆ ಸಾಮಾನ್ಯ ಸೇವಾಕೇಂದ್ರಕ್ಕೆ ಹೋಗಿ ತಮ್ಮ ಸಾಲಸೌಲಭ್ಯ ಅರ್ಜಿಯನ್ನು ನೊಂದಣಿ ಮಾಡಿಕೊಳ್ಳುವಂತೆ ಈ ಮೂಲಕ ಅವರು ಕೋರಿದ್ದಾರೆ.