ಕಾರವಾರ: ಜ.25 ರಂದು ಪಿಂಚಣಿ ಅದಾಲತ್

Source: S O News | By I.G. Bhatkali | Published on 20th January 2022, 7:42 PM | Coastal News |

ಕಾರವಾರ: ಕಾರವಾರ ವಿಭಾಗೀಯ ಅಂಚೆ ಪಿಂಚಣಿ ಅದಾಲತ್ ಜ.25ರ ಬೆಳಿಗ್ಗೆ 11ಗಂಟೆಗೆ ಕಾರವಾರ ವಿಭಾಗದ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ. 

ಕಾರವಾರ ವಿಭಾಗದಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಪಿಂಚಣಿದಾರರು ಮಾತ್ರ ಅದಾಲತ್‍ನಲ್ಲಿ ಪಾಲ್ಗೊಳ್ಳಬಹುದು. ಗ್ರಾಮೀಣ ಅಂಚೆ ಸೇವಕರಿಗಾಗಲಿ ಅಥವಾ ಅಂಚೆ ಇಲಾಖೆಯ ಮೂಲಕ ಪಿಂಚಣಿ, ಪಡೆಯುತ್ತಿರುವ ಇತರೆ ನೌಕರರಿಗೆ ಅವಕಾಶವಿರುವುದಿಲ್ಲ. ಪಾಲ್ಗೊಳ್ಳುವ ಅಂಚೆ ಪಿಂಚಣಿದಾರರಿಗೆ ಯಾವುದೇ ಭತ್ಯೆ ಕೊಡಲಾಗುವುದಿಲ್ಲ.

ಅಂಚೆ ಪಿಂಚಣಿದಾರರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ತಮ್ಮ ಎಲ್ಲಾ ವಿವರ, ವಿಳಾಸ, ಪಿಪಿಒ ನಂಬರ್ ಮತ್ತು ಪಿಂಚಣಿ ಪಡೆದುಕೊಳ್ಳುತ್ತಿರುವ ಅಂಚೆ ಕಚೇರಿ ಇತ್ಯಾದಿ ವಿವರಗಳೊಂದಿಗೆ ಜ.24ರೊಳಗೆ ಕಚೇರಿಗೆ ತಲುಪುವ ಹಾಗೆ ಕಳುಹಿಸುವುದು.

ಕುಂದು ಕೊರತೆಗಳನ್ನು ಪೂರ್ತಿ ವಿವರಗಳ ಸಹಿತ ಈ ಮೇಲ್: [email protected] ಗೆ ಸಲ್ಲಿಸಬಹುದು. ಮೋಬೈಲ್ ನಂಬರ್ ಬರೆದರೆ ಉತ್ತಮವೆಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...