ಕಾರವಾರ: ವಿದ್ಯಾಸಿರಿ ಯೋಜನೆಯಡಿಯಲ್ಲಿ 2019-20 ನೇ ಸಾಲಿಗೆ, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ದೊರಕದ ಹಾಗೂ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500 ರಂತೆ ಶೈಕ್ಷಣಿ ಅವಧಿ 10 ತಿಂಗಳು ಕಾಲ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ. 20 ಕೊನೆಯ ದಿನವಾಗಿದ್ದು, https://gokdom.kar.nic.in https://dom.karnataka.gov.in/uttarakannada ವೆಬ್ ಸೈಟ್ ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು. ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ಅರ್ಜಿಯೊಂದಿಗೆ ಧೃಡೀಕರಿಸಿದ ದಾಖಲೆಗಳನ್ನು ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಕ್ಕೆ ಖುದ್ದಾಗಿ ಅಥವಾ ಕಾಲೇಜಿನ ಮುಖಾಂತರ ಸಲ್ಲಿಸಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ಕಾರವಾರ ಕಚೇರಿ ದೂರವಾಣಿ ಸಂಖ್ಯೆ: 08382-220336 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.