ಖರ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ
ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಯ ಪ್ರತಿಪಕ್ಷ ನಾಯಕರನ್ನಾಗಿ ನಿಯೋಜಿಸಲಾಗಿದೆ. ಗುಲಾಂ ನಬಿ ಆಜಾದ್ ಅವರ ಅವಧಿ ಸೋಮವಾರ ಅಂತ್ಯವಾಗುತ್ತಿದ್ದು, ಈ ಹುದ್ದೆಗೆ ಖರ್ಗೆ ಅವರನ್ನು ನೇಮಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೇಲ್ಕನೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಪ್ರಬಲ ರಾಜಕಾರಣಿಯಾಗಿರುವ ಖರ್ಗೆ ಅವರು 2014-19ರ ಅವಧಿ ಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದರು.
ಪ್ರಸಕ್ತ ನಡೆಯುತ್ತಿರುವ ಸಂಸತ್ತಿನ ಕಲಾಪ ಶುಕ್ರವಾರ ಅಂತ್ಯಗೊಂಡಿದ್ದು, ಮುಂದಿನ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನಾಗಿ ಖರ್ಗೆ ಅವರ ಪ್ರಬಲ ಧ್ವನಿ ಕೇಳಿಬರಲಿದೆ.