ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಜ್ಞಾನದಿಂದ ಮಾತ್ರ ಸಾಧ್ಯ- ಡಾ.ಆರ್.ಶ್ರೀನಿವಾಸ್ 

Source: sonews | By Staff Correspondent | Published on 13th July 2019, 5:58 PM | State News | Don't Miss |

ಕೋಲಾರ:  ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಲು ಜ್ಞಾನದಿಂದ ಮಾತ್ರ ಸಾಧ್ಯವೇ ಹೊರತು ಅಂಕಗಳಿಂದಲ್ಲ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಆರ್.ಶ್ರೀನಿವಾಸ್ ಅವರು ತಿಳಿಸಿದರು. 

ನಗರ ಹೊರವಲಯದ ಹೊನ್ನೇನಹಳ್ಳಿಯಲ್ಲಿನ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಶುಕ್ರವಾರ ಸಿ.ಬೈರೆಗೌಡ ತಾಂತ್ರಿಕ ವಿದ್ಯಾಲಯದ ಈಸ್ಟ್ ಪಾಯಿಂಟ್ ತಾಂತ್ರಿಕ ವಿದ್ಯಾಲಯದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ತಾಂತ್ರಿಕ ವಿದ್ಯಾಲಯದ ಅಂತಿಮ ವರ್ಷದ ಸಿವಿಲ್ ವಿಭಾಗದ ವಿದ್ಯಾರ್ಥಿಗಳಿಗೆ, ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎರಡು ವಾರಗಳ ಇಂಟರ್ನ್‍ಷಿಪ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು  ಮಾತನಾಡಿದರು. 

ವಿದ್ಯಾರ್ಥಿಗಳು ಉತ್ತಮ ಜ್ಞಾನವನ್ನು ಬೆಳೆಸಿಕೊಳ್ಳಲು ಪ್ರಾಯೋಗಿಕ ವಿಧಾನವು ತುಂಬಾ ಮುಖ್ಯವಾದುದು. ಇದರಿಂದ ಸರ್ವತೋಮುಖ ಬೆಳವಣಿಗೆಯು ಸಾಧ್ಯವಾಗುತ್ತದೆ. ನೂತನ ಆವಿಷ್ಕಾರಗಳ ಬಗ್ಗೆ ತಿಳಿದುಕೊಂಡು ಅದನ್ನು ಅಳವಡಿಸಿಕೊಳ್ಳುವುದಕ್ಕೆ ಈ ವಿಧಾನವು ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಹೇಳಿದರು. 

ಜ್ಞಾನವನ್ನು ಪಡೆದುಕೊಳ್ಳಬೇಕು ಎಂಬ ಕಾತುರ ಇತ್ತೀಚೆಗೆ ಕಡಿಮೆಯಾಗುತ್ತಿದೆ. ಯುವ ಸಮುದಾಯವು ಕಲಿಕೆಯಲ್ಲಿ ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳಬೇಕು. ಕಾರ್ಯಾಗಾರಗಳು ಮತ್ತು ಶಿಬಿರಗಳಿಂದ ಹೆಚ್ಚಿನ ಕಲಿಕೆಯಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಹೊಂದುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಕಲಿಕೆಯು ನಿಂತ ನೀರಲ್ಲ. ಸಂಪೂರ್ಣವಾಗಿ ನಾನು ಎಲ್ಲಾ ಕಲಿತಿದ್ದೇನೆ ಎಂಬುವವರೂ ಯಾರೂ ಇಲ್ಲ. ತಿಳಿದುಕೊಂಡಿರುವುದು ಸ್ವಲ್ಪ, ತಿಳಿಯದೇ ಇರುವುದೇ ಹೆಚ್ಚು ಎಂಬುದನ್ನು ಪ್ರತಿಯೊಬ್ಬರೂ ಒಪ್ಪಲೇಬೇಕಾದ ವಿಚಾರ. ಹಾಗಾಗಿ ಕಲಿಕೆಯು ನಿರಂತರವಾಗಿ ನಡೆಯಲೇಬೇಕು. ಈ ರೀತಿಯಾಗಿ ಕಲಿಯಲು ತಾಳ್ಮೆ ಅವಶ್ಯಕ. ತಾಳ್ಮೆಯಿಂದ ಕಲಿತದ್ದೇ ಆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. 

ತ್ಯಾಜ್ಯಗಳಲ್ಲಿ ಪ್ರಮುಖವಾಗಿ ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಹಸಿ ಕಸ, ಒಣ ಕಸ, ವೈದ್ಯಕೀಯ ತ್ಯಾಜ್ಯ ಹಾಗೂ ಇ-ತ್ಯಾಜ್ಯವನ್ನು ಮರು ಉಪಯೋಗಕ್ಕೆ ಕಳುಹಿಸಿಕೊಡಬೇಕು. ಇಂಜಿನಿಯರ್ ವಿದ್ಯಾರ್ಥಿಗಳು ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಹೆಚ್ಚು ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಮುಂಜಾಗ್ರತೆಯನ್ನು ವಹಿಸಬೇಕು ಎಂದು ಹೇಳಿದರು. 

ಕಟ್ಟಡಗಳು, ಚೆಕ್‍ಡ್ಯಾಂಗಳು, ರಸ್ತೆಗಳು ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳನ್ನು ಮಾಡುವಾಗ ಮುಂದಾಲೋಚನೆಯನ್ನು ಮಾಡುವುದರ ಜೊತೆಗೆ ನೂತನ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಇದರ ಜೊತೆಗೆ ಮಳೆನೀರಿನ ಕೊಯ್ಲು ನಿರ್ಮಾಣಕ್ಕೆ ಆದ್ಯತೆಯನ್ನು ನೀಡಬೇಕು. ಇದರಿಂದ ಮಳೆ ನೀರನ್ನು ಸಂಗ್ರಹಿಸುವ ಕೆಲಸ ಮಾಡಬೇಕು. ಮುಂದೆ ಇಂಜನಿಯರ್‍ಗಳಾಗಿ ಕೆಲಸ ಮಾಡುವಾಗ ಈ ರೀತಿಯ ಎಲ್ಲಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದರು. 

ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಕೆ.ಎನ್. ನಾರಾಯಣಗೌಡ ಅವರು ಮಾತನಾಡಿ, ಪ್ರಚಲಿತ ದಿನಗಳಲ್ಲಿ ಸಾಕಷ್ಟು ನೂತನ ತಂತ್ರಜ್ಞಾನಗಳು ಬಂದಿವೆ. ಇವುಗಳನ್ನು ಪರಿಚಯ ಮಾಡುವುದೇ ಅಲ್ಲದೆ ಅವುಗಳನ್ನು ಬಳಸಿಕೊಳ್ಳುವುದು, ಮಳೆ ನೀರಿನ ಸಂರಕ್ಷಣೆ, ಕಸ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಲಾಗುವುದು. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. 

 ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರಕ್ಕಾಗಿ ಓದಬಾರದು. ಜ್ಞಾನವನ್ನು ವೃದ್ಧಿಸಿಕೊಳ್ಳಲು ಓದಬೇಕು. ಸಮಯ ಪ್ರಜ್ಞೆ ಬಹು ಮುಖ್ಯವಾದುದು. ಯಾವುದೇ ಕಾರಣಕ್ಕೂ ಸಮಯ ವ್ಯರ್ಥ ಮಾಡಬಾರದು. ಗೊತ್ತಿಲ್ಲದ ವಿಚಾರಗಳನ್ನು ಯಾವುದೇ ಮುಜುಗರವಿಲ್ಲದೆ ಕೇಳಿ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು. 

 ಮಾಡುವ ಕೆಲಸದಲ್ಲಿ ಹಂತಗಳು ಬೇರೆ ಬೇರೆ ಇರಬಹುದು. ಆದರೆ ಮೌಲ್ಯಗಳು ಮಾತ್ರ ಒಂದೇ. ವಿದ್ಯಾರ್ಥಿಗಳು ಮೊದಲು ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಜೀವಿಸಲು ಸಾಧ್ಯ ಎಂದರು. 

ಈ ಸಂದರ್ಭದಲ್ಲಿ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕರಾದ ರಮಾಕಾಂತ್‍ಯಾದವ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ವಾಗತಕಾರರು ಹಾಗೂ ಗ್ರಂಥಪಾಲಕರಾದ ಎಂ.ಎಸ್.ಸುಧಾ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...