ಕೊಡಗು: ತಲಕಾವೇರಿ ಅರ್ಚಕರ ಕುಟುಂಬದ ಒಂದು ಮೃತ ದೇಹ ಪತ್ತೆ, ಮುಂದುವರಿದ ಶೋಧ ಕಾರ್ಯ!

Source: vk news | Published on 8th August 2020, 7:56 PM | State News | Don't Miss |

ಕೊಡಗು: ತಲಕಾವೇರಿಯ ಭೂಕುಸಿತದ ಸ್ಥಳದಲ್ಲಿ ಒಂದು ಮೖತ ದೇಹ ಪತ್ತೆಯಾಗಿದೆ. ಭಾರೀ ಮಳೆ ನಡುವೆಯು ಶನಿವಾರ ಎನ್.ಡಿ.ಆರ್.ಎಫ್. ಕಾಯಾ೯ಚರಣೆ ನಡೆಸಿತ್ತು. ಅರ್ಚಕರ ಕುಟುಂಬದ ಐವರ ಮೖತದೇಹಕ್ಕಾಗಿ ಶೋಧ ಕಾಯ೯ ನಡೆಸಿತ್ತು. ಈ ವೇಳೆ ಐವರ ಪೈಕಿ ಒಬ್ಬರ ಮೖತದೇಹ ಪತ್ತೆಯಾಗಿದೆ.
ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್‌ ಅವರ ಸಹೋದರ ಆನಂದತೀಥ೯(86) ಎಂಬವರ ಮೃತ ದೇಹ ಎಂದು ಗುರುತಿಸಲಾಗಿದೆ. ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿತ್ತು.
ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಪತ್ನಿ ಶಾಂತಾ, ಸಹೋದರ ಆನಂದತೀಥ೯ ಹಾಗೂ ಇಬ್ಬರು ಅರ್ಚಕರು ನಾಪತ್ತೆಯಾಗಿದ್ದರು. ತಕ್ಷಣಾ ಸ್ಥಳೀಯರಿಂದ ರಕ್ಷಣಾ ಕಾಯಾ೯ಚರಣೆ ನಡೆದಿತ್ತು ಆದರೆ ತೀವ್ರ ಪ್ರಮಾಣದ ಮಣ್ಣು ಬಿದ್ದಿದ್ದರಿಂದ ಇದು ಸಾಧ್ಯವಾಗಿರಲಿಲ್ಲ. ಅಲ್ಲದೇ ಮಳೆ ಕೂಡ ಜೋರಾಗಿ ಸುರಿಯುತ್ತಿದ್ದರಿಂದ ರಕ್ಷಣಾ ಕಾರ್ಯ ನಡೆದಿರಲಿಲ್ಲ.
ತಲಕಾವೇರಿಯಲ್ಲಿ ಗುಡ್ಡ ಕುಸಿತ: ಪ್ರಧಾನ ಅರ್ಚಕರ ಮನೆ ಜಖಂ, ಕುಂಟುಂಬ ಸದಸ್ಯರು ಕಣ್ಮರೆ
ಶನಿವಾರ ರಕ್ಷಣಾ ಕಾರ್ಯಾಚರಣೆಗೆ ಸಜ್ಜಾದ ಎನ್‌ಡಿಆರ್‌ಎಫ್‌ ತಂಡ ಮೃತ ದೇಹ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದೆ. ಎರಡು ದಿನಗಳಿಂದ ರಕ್ಷಣಾ ಕಾರ್ಯ ಸರಿಯಾಗಿ ನಡೆದಿರಲಿಲ್ಲ. ಸದ್ಯ ಶೋಧ ಕಾರ್ಯ ಮುಂದುವರಿದಿದೆ.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...