ಕೋಲಾರ: ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಮಂದಿರ, ಅಂಬೇಡ್ಕರ್ ಪತ್ರಿಮೆಗೆ ಸ್ಥಳಕ್ಕೆ ಮನವಿ

Source: shabbir | By Arshad Koppa | Published on 14th July 2017, 11:06 AM | State News | Guest Editorial |

ಕೋಲಾರ,ಜು.13: ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಮಂದಿರ, ಅಂಬೇಡ್ಕರ್ ಪತ್ರಿಮೆಗೆ ಸ್ಥಳ ಮತ್ತು 100 ನಿವೇಶನಗಳಿಗೆ ಸ್ಥಳವನ್ನು ನೀಡುವಂತೆ ಅಖಿಲ ಭಾರತ ಅಂಬೇಡ್ಕರ್ ಅಲ್ಪಸಂಖ್ಯಾತರ ವಾಲ್ಮೀಕಿ ಪ್ರಜಾಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ. ಪ್ರಕಾಶ್‍ಬಾಬು ರವರು ಶಾಸಕ ಮಂಜುನಾಥಗೌಡ ರವರಿಗೆ ಮನವಿ ಸಲ್ಲಿಸಿದರು.
    ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಹೈಮಾಕ್ಸ್ ಲೈಟ್ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕರಿಗೆ ಮನವಿ ಸಲ್ಲಿಸಿದ ಅವರು ಗ್ರಾಮದಲ್ಲಿ ಎಸ್.ಸಿ/ಎಸ್.ಟಿ ಜನಾಂಗದ ಸುಮಾರು 700 ಕುಟುಂಬಗಳು ವಾಸವಾಗಿದ್ದು ಅನೇಕರಿಗೆ ಮನೆಗಳ ನಿರ್ಮಾಣಕ್ಕೆ  ನಿವೇಶನಗಳಿಲ್ಲದೆ ತುಂಬಾ ಅನಾನಕೂಲವಾಗಿದೆ ಕೂಡಲೇ 100 ನಿವೇಶನಗಳಿಗೆ ಸ್ಥಳಾವಕಾಶ, ಅಂಬೇಡ್ಕರ್ ಮಂದಿರ ನಿರ್ಮಾಣ ಹಾಗೂ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸ್ಥಳವನ್ನು ಕೊಡಿಸಕೊಡಬೇಕೆಂದು ಒತ್ತಾಯಿಸಿಲಾಗಿದೆ.
    ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಶಾಸಕರು ಶೀಘ್ರವಾಗಿ ಸ್ಥಳಾವಕಾಶ ಮಾಡಿಕೊಡುವುದಾಗಿ ಹಾಗೂ ಗ್ರಾಮದಲ್ಲಿ ಸಿ.ಸಿ.ರಸ್ತೆಗಳನ್ನು ನಿರ್ಮಿಸಲು ಹಾಗೂ ಸ್ಮಶಾನ ದಾರಿಯನ್ನು ಮಾಡಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.


 

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...