ಕೋಲಾರ:- ಮಕ್ಕಳಿಗೆ ದೇಶಕ್ಕಾಗಿ ಹೋರಾಡಿ ಪ್ರಾಣತೆತ್ತ ವೀರಯೋಧರು ಹಾಗೂ ರಾಷ್ಟ್ರನಾಯಕರ ಆದರ್ಶ ಸಾರುವ ಚಲನಚಿತ್ರಗಳನ್ನು ತೋರಿಸುವ ಮೂಲಕ ಅವರ ಮನಸ್ಸಿನಲ್ಲಿ ದೇಶಪ್ರೇಮ ತುಂಬಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಸಿ.ಆರ್.ಆಶೋಕ್ ಅಭಿಪ್ರಾಯಪಟ್ಟರು.
ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಚಲನಚಿತ್ರೋತ್ಸವ ಸಮಿತಿ ವತಿಯಿಂದ ನಗರದ ಪ್ರಭಾತ್ ಚಿತ್ರಮಂದಿರದಲ್ಲಿ 2017-18ನೇ ಸಾಲಿನ ಮಕ್ಕಳ ಚಲನಚಿತ್ರೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸುಶೀಕ್ಷಿತರೇ ಇಂದು ದೇಶದ್ರೋಹ ಚಟುವಟಿಕೆಗಳಲ್ಲಿ ಹೆಚ್ಚು ತೊಡಗುತ್ತಿರುವುದು ವಿಷಾದದ ಸಂಗತಿ ಎಂದ ಅವರು, ಈ ಹಿನ್ನಲೆಯಲ್ಲಿ ಇಂದಿನ ಶಿಕ್ಷಣದಲ್ಲಿ ಸಂಸ್ಕಾರ,ದೇಶಪ್ರೇಮದ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕುಟುಂಬ ಸಮೇತ ನೋಡುವ ಚಿತ್ರಗಳ ಕೊರತೆ ಕಾಡುತ್ತಿದೆ, ಕೇವಲ ಮನರಂಜನೆ ಮತ್ತು ಹಣಗಳಿಕೆಯ ಉದ್ದೇಶದಿಂದ ಮಾತ್ರವೇ ಚಿತ್ರ ನಿರ್ಮಿಸುವ ಮನೋಭಾವ ಹೆಚ್ಚುತ್ತಿದೆ ಎಂದರು.
ಟಿವಿ,ಮೊಬೈಲ್ ವ್ಯಾಮೋಹಕ್ಕೆ ಸಿಲುಕಿರುವ ಮಕ್ಕಳನ್ನು ಮಕ್ಕಳ ಧೈರ್ಯ,ಸಾಹಸ ಗಾಥೆಯನ್ನು ಒಳಗೊಂಡ ಹಾಗೂ ಈ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರ ಚರಿತ್ರೆಯನ್ನು ಒಳಗೊಂಡ ಚಿತ್ರಗಳನ್ನು ನೋಡಲು ಪ್ರೇರೇಪಿಸಬೇಕು ಎಂದರು.
ದೇಶಪ್ರೇಮ, ನಮ್ಮ ರಾಷ್ಟ್ರಧ್ವಜ,ಹಿರಿಯರನ್ನು ಗೌರವಿಸುವ ಪ್ರವೃತ್ತಿ ಬಲಗೊಳ್ಳಲು ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಉತ್ತಮ ಚಲನಚಿತ್ರಗಳ ಅಗತ್ಯವಿದೆ ಎಂದರು.
ಶಿಕ್ಷಣ ಸಂಯೋಜಕ ಕೆಂಪೇಗೌಡ, ಶಿಕ್ಷಣ ಇಲಾಖೆಯಿಂದ ತಾಲ್ಲೂಕಿನ ಸುಮಾರು 12 ಸಾವಿರ ವಿದ್ಯಾರ್ಥಿಗಳಿಗೆ ಆ.19 ರಿಂದ 24 ರವರೆಗೂ ಆರು ದಿನಗಳ ಕಾಲ ಈ ಚಲನಚಿತ್ರೋತ್ಸವ ನಡೆಸಲಾಗುತ್ತಿದೆ ಎಂದರು.
ನಗರದ ಪ್ರಭಾತ್, ಶಾರದಾ, ಭವಾನಿ, ವೆಂಕಟೇಶ್ವರ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ `ಅರಿವು' ಚಿತ್ರಪ್ರದರ್ಶನ ನಡೆಸುತ್ತಿರುವುದಾಗಿ ತಿಳಿಸಿದರು.
ಪ್ರತಿ ನಿತ್ಯ ಸುಮಾರು 2 ಸಾವಿರಕ್ಕೂ ಹೆಚ್ಚಿನ ಮಕ್ಕಳು ಚಿತ್ರ ವೀಕ್ಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾತ್ ಚಿತ್ರಮಂದಿರ ಮಾಲೀಕ ಅಶ್ವಥ್, ವ್ಯವಸ್ಥಾಪಕ ರವಿಶಂಕರ್, ನಾರಾಯಣಸ್ವಾಮಿ, ಪೋಷಕರಾದ ತನ್ವೀರ್, ಪಿಯು ಶಿಕ್ಷಣ ಇಲಾಕೆಯ ಗೋಪಿನಾಥ್, ಮತ್ತಿತರರು ಹಾಜರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ
Read These Next
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...